Advertisement

Maharashtra ಪರಿಶಿಷ್ಟ ಜಾತಿ ಆಯೋಗಕ್ಕೆ ಸಂವಿಧಾನಿಕ ಮಾನ್ಯತೆ ಅಧ್ಯಾದೇಶ

01:39 AM Oct 11, 2024 | Team Udayavani |

ಮುಂಬಯಿ: ರಾಜ್ಯ ಪರಿಶಿಷ್ಟ ಜಾತಿ ಆಯೋಗಕ್ಕೆ ಸಾಂವಿಧಾನಿಕ ಸ್ಥಾನಮಾನ ನೀಡುವ ಅಧ್ಯಾದೇಶಕ್ಕೆ ಅನುಮೋದನೆ ನೀಡಲು ಮಹಾರಾಷ್ಟ್ರ ಸಚಿವ ಸಂಪುಟ ಗುರುವಾರ ನಿರ್ಧರಿಸಿದೆ. ಈ ಮೂಲಕ ಈ ವರ್ಷಾಂತ್ಯದಲ್ಲಿ ನಡೆಯುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ­ಯಲ್ಲಿ ಮತ್ತೆ ಅಧಿಕಾರಕ್ಕೇರು­ವು­­ದಕ್ಕಾಗಿ ಬಿಜೆಪಿ, ಶಿವಸೇನೆ (ಶಿಂಧೆ) ಮತ್ತು ಎನ್‌ಸಿಪಿ(ಅಜಿತ್‌) ನೇತೃತ್ವದ ಮೈತ್ರಿಕೂಟ ಯೋಜಿಸಿದೆ ಎನ್ನಲಾಗಿದೆ.
ಅಲ್ಲದೇ ಒಬಿಸಿಗಳಲ್ಲಿ ಕೆನೆಪದರಕ್ಕೆ ಸೇರಿಸುವ ಆದಾಯದ ಮಾನದಂಡ­ವನ್ನು ವಾರ್ಷಿಕ 8 ಲಕ್ಷ ರೂ.ನಿಂದ 15 ಲಕ್ಷ ರೂ.ಗೆ ಏರಿಸಲು ಕೇಂದ್ರವನ್ನು ಒತ್ತಾಯಿಸುವ ಪ್ರಸ್ತಾವಕ್ಕೆ ಒಪ್ಪಿಗೆ ನೀಡಲು ಸಹ ಸಂಪುಟ ನಿರ್ಧರಿಸಿದೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಮುಖ್ಯಮಂತ್ರಿ ಕಚೇರಿ, ಈ ಅಧ್ಯಾದೇಶವನ್ನು ಮುಂದಿನ ವಿಧಾನಸಭೆ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಹೇಳಿದೆ.

Advertisement

ಕಾಂಗ್ರೆಸ್‌, ಉದ್ಧವ್‌ ಠಾಕ್ರೆ ನೇತೃತ್ವದ ಶಿವಸೇನೆ, ಶರದ್‌ ಪವಾರ್‌ ಅವರ ನೇತೃತ್ವದ ಎನ್‌ಸಿಪಿ ಮೈತ್ರಿಕೂಟ ಲೋಕಸಭೆ ಚುನಾವಣೆಯಲ್ಲಿ 30 ಸ್ಥಾನಗಳನ್ನು ಗೆಲ್ಲುವ ಮೂಲಕ ಆಡಳಿತ ಮೈತ್ರಿಕೂಟಕ್ಕೆ ಶಾಕ್‌ ನೀಡಿತ್ತು. ಹೀಗಾಗಿ ಮುಂದಿನ ವಿಧಾನಸಭೆ ಚುನಾವಣೆ ಗೆಲ್ಲಲು ಆಡಳಿತ ಮೈತ್ರಿಕೂಟ ಈಗಿನಿಂದಲೇ ಯೋಜನೆ ಮಾಡುತ್ತಿದೆ ಎನ್ನಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next