Advertisement

ಶಾಲಾ ಕೊಠಡಿ ನಿರ್ಮಾಣಕ್ಕೆ ಶಂಕು ಸ್ಥಾಪನೆ

03:10 PM Dec 30, 2019 | Team Udayavani |

ಚನ್ನರಾಯಪಟ್ಟಣ/ನುಗ್ಗೇಹಳ್ಳಿ: ತಾಲೂಕಿನ ನುಗ್ಗೇಹಳ್ಳಿ ಹೋಬಳಿಯ ತೆಂಕನಹಳ್ಳಿ ಹತ್ತು ಲಕ್ಷ ರೂ. ಅನುದಾನದಲ್ಲಿ ನಿರ್ಮಾಣವಾಗಲಿರುವ ಸರ್ಕಾರಿ ಶಾಲೆಯ ಹೆಚ್ಚುವರಿ ಕೊಠಡಿ ನಿರ್ಮಾಣಕ್ಕೆ ಶಾಸಕ ಸಿ.ಎನ್‌.ಬಾಲಕೃಷ್ಣ ಶಂಕುಸ್ಥಾಪನೆ ನೆರವೇರಿಸಿದರು.

Advertisement

ಈ ವೇಳೆ ಮಾತನಾಡಿದ ಅವರು, ತೆಂಕನಹಳ್ಳಿ ಗೇಟ್‌ನಿಂದ ಗೌಡಗೆರೆ ಗ್ರಾಮದವರೆಗೆ ಡಾಂಬರು ರಸ್ತೆ ನಿರ್ಮಾಣ ಮಾಡಲಾಗುವುದು. ತೆಂಕನಹಳ್ಳಿ ಗ್ರಾಮದಲ್ಲಿ ಒಳಚರಂಡಿ ನಿರ್ಮಿಸಲಾ ಗುವುದು. ಗ್ರಾಮದಲ್ಲಿ ಹೈನುಗಾರಿಕೆಗೆ ಹೆಚ್ಚು ಒತ್ತು ನೀಡುವ ದೃಷ್ಟಿಯಿಂದ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ನಿರ್ದೇಶಕ ಎಂ.ಶಂಕರ್‌ ಮಾತನಾಡಿ, ಗ್ರಾಮದಲ್ಲಿ ನಿರ್ಮಾಣ ವಾಗುತ್ತಿರುವ ಸಮುದಾಯ ಭವನಕ್ಕೆ ಜಿಲ್ಲಾ ಪಂಚಾಯಿತಿ ಸದಸ್ಯೆಯ ಅನುದಾನದಲ್ಲಿ 10 ಲಕ್ಷ ರೂ. ಶಾಲಾ ಕೊಠಡಿಗೆ ಐದು ಲಕ್ಷ ರೂ. ಬಿಡುಗಡೆ ಮಾಡುವಂತೆ ಈಗಾಗಲೇ ತಿಳಿಸಲಾಗಿದ್ದು, ಜಿಪಂ ಸದಸ್ಯೆ ಮಂಜುಳಾ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು.

ಎಸ್‌ಡಿಎಂಸಿ ಅಧ್ಯಕ್ಷ ಉಮೇಶ್‌, ಗ್ರಾಮ ಪಂಚಾಯಿತಿ ಸದಸ್ಯೆ ವನಜಾಕ್ಷಿ, ದೇವರಾಜ್‌, ಕ್ಷೇತ್ರ ಶಿಕ್ಷಣಾಧಿಕಾರಿ ಸೋಮನಾಥ್‌, ಮುಖಂಡರಾದ ಶಿವ  ನಾಗೇಂದ್ರಬಾಬು, ಮಧು, ಮರುವನಹಳ್ಳಿ ಬಾಲು, ರಂಗೇಗೌಡ, ರಾಜಶೇಖರ್‌, ಕೃಷ್ಣೇಗೌಡ, ಶಿವಣ್ಣ, ಇಸಿಒ ನಿತ್ಯಾನಂದ್‌, ಸಿಆರ್‌ಪಿ ಅಂತೋಣಿ ಪ್ರಸಾದ್‌, ಶಿಕ್ಷರಾದ ವಿಜಯಕುಮಾರ್‌, ರೇಖಾ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next