Advertisement

ಕಾಲುವೆ, ತೊರೆಗಳಿಗೆ ಸೇತುವೆ ನಿರ್ಮಾಣ: ಸಿಎಂ ಕುಮಾರಸ್ವಾಮಿ

06:00 AM Sep 27, 2018 | Team Udayavani |

ಬೆಂಗಳೂರು: ಮಲೆನಾಡು, ಕರಾವಳಿ ಸೇರಿ ಇನ್ನಿತರ ಭಾಗಗಳಲ್ಲಿ ಶಾಲಾ-ಕಾಲೇಜು ಮಕ್ಕಳ ಅನುಕೂಲಕ್ಕಾಗಿ ತೊರೆ ಹಾಗೂ ಕಾಲುವೆಗಳಿಗೆ ಶಾಶ್ವತ ಸೇತುವೆಗಳ ನಿರ್ಮಾಣಕ್ಕೆ 121 ಕೋಟಿ ರೂ. ಮೀಸಲಿಟ್ಟಿದ್ದು, ಶೀಘ್ರದಲ್ಲಿಯೇ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

Advertisement

ಬಿಬಿಎಂಪಿ ವತಿಯಿಂದ ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ಹಮ್ಮಿಕೊಂಡಿದ್ದ “ಬಿಬಿಎಂಪಿ ರೋಷಣಿ’ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸಬೇಕು ಎಂಬುದು ಸಮ್ಮಿಶ್ರ ಸರ್ಕಾರದ ಉದ್ದೇಶವಾಗಿದೆ. ಹಿಗಾಗಿ ಮಕ್ಕಳ ಜೀವ ರಕ್ಷಣೆಯ ಉದ್ದೇಶದಿಂದ ಶಾಶ್ವತ ಕಾಲುವೆಗಳ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ ಎಂದು ಹೇಳಿದರು.

ಮಳೆಗಾಲದಲ್ಲಿ ಶಾಲಾ ಮಕ್ಕಳು ಕಾಲುವೆ, ತೊರೆ ದಾಟುವಾಗ ಬಿದ್ದು ಮೃತಪಟ್ಟಿರುವ ಘಟನೆಗಳ ಮಾಹಿತಿಯನ್ನು ಪಡೆಯಲಾಗಿದ್ದು, ಇಂತಹ ಘಟನೆಗಳು ಮತ್ತೆ ಸಂಭವಿಸಬಾರದೆಂಬ ಉದ್ದೇಶದಿಂದ ಅಪಾಯಕಾರಿ ಎನಿಸುವ ಸ್ಥಳಗಳಲ್ಲಿ ಶಾಶ್ವತ ಕಾಲು ಸೇತುವೆಗಳ ನಿರ್ಮಾಣಕ್ಕೆ ಮುಂದಾಗಿದ್ದೇವೆ. ಅದಕ್ಕಾಗಿಯೇ ಸರ್ಕಾರದಿಂದ 121 ಕೋಟಿ ರೂ. ಅನುದಾನ ಮೀಸಲಿಡಲಾಗಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಆರಂಭವಾಗಲಿದೆ ಎಂದು ತಿಳಿಸಿದರು.

ಸರ್ಕಾರಿ ಶಾಲೆಗಳ ಮೇಲ್ದರ್ಜೆಗೆ ಸಾವಿರ ಕೋಟಿ ರೂ.
ಖಾಸಗಿ ಶಾಲೆಗಳಂತೆ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೂ ಗುಣಾತ್ಮಕ ಶಿಕ್ಷಣ ದೊರೆಯಬೇಕಿದ್ದು, ಶಾಲೆಗಳಿಗೆ ಅಗತ್ಯವಾದ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಅನಿವಾರ್ಯತೆಯಿದೆ. ಅದರಂತೆ ರಾಜ್ಯದ ಸರ್ಕಾರಿ ಶಾಲೆಗಳ ದುರಸ್ತಿ ಹಾಗೂ ನವೀಕರಣಕ್ಕಾಗಿ ಇದೇ ಮೊದಲ ಬಾರಿಗೆ 1000 ಕೋಟಿ ರೂ.ಗಳನ್ನು ಮೀಸಲಿಡಲಾಗಿದ್ದು, ತ್ವರಿತವಾಗಿ ಹೊಸ ಕಟ್ಟಡಗಳ ನಿರ್ಮಾಣ ಹಾಗೂ ದುರಸ್ತಿ ಕಾರ್ಯ ನಡೆಸಲಾಗುತ್ತದೆ ಎಂದು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next