Advertisement

ಕೊಡಗು ಪುನರ್ ನಿರ್ಮಾಣ ಪ್ರಾಧಿಕಾರ ರಚನೆ; CM ಕುಮಾರಸ್ವಾಮಿ ಘೋಷಣೆ

03:19 PM Oct 17, 2018 | Sharanya Alva |

ಮಡಿಕೇರಿ: ಪ್ರವಾಹ ಪೀಡಿತ ಕೊಡಗು ನಾಡನ್ನು ಹೊಸದಾಗಿ ಕಟ್ಟಲು ರಾಜ್ಯ ಸರ್ಕಾರ ಬದ್ಧವಾಗಿದೆ. ಈ ಹಿನ್ನೆಲೆಯಲ್ಲಿ ಕೊಡಗು ಪುನರ್ ನಿರ್ಮಾಣ ಪ್ರಾಧಿಕಾರ ರಚಿಸುವುದಾಗಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬುಧವಾರ ಘೋಷಿಸಿದ್ದಾರೆ.

Advertisement

ಕೊಡಗಿಗೆ ಆಗಮಿಸಿದ್ದ ಸಿಎಂ ಕುಮಾರಸ್ವಾಮಿ ಅವರು ಸಂತ್ರಸ್ತರ ಜೊತೆ ಸಂವಾದ ನಡೆಸುತ್ತಾ, ಬೆಂಗಳೂರಿನಿಂದ ನಾನು ನಿಮ್ಮ ಸಮಸ್ಯೆ ಆಲಿಸಲು ಬಂದಿದ್ದೇನೆ. ಇಲ್ಲಿ ಯಾವುದೇ ರಾಜಕೀಯ ಭಾಷಣ ಮಾಡುತ್ತಿಲ್ಲ ಎಂದರು.

ಭಾಗಮಂಡಲಕ್ಕೆ ಹೋದರೆ ಅಧಿಕಾರ ಕಳೆದುಕೊಳ್ಳುತ್ತೀರಿ ಎಂದು ಹೇಳಿದ್ದರು. ಆದರೆ ನನಗೆ ಭಾಗಮಂಡಲವೇನೂ ಹೊಸದಲ್ಲ, ಭಾಗಮಂಡಲಕ್ಕೆ ಬಂದು ಹೋದ ಮೇಲೂ ಸಿಎಂ ಆಗಿದ್ದೇನೆ. ನನಗೆ ಜನರು ಮುಖ್ಯ ಎಂದು ಹೇಳಿದರು.

ಕೊಡಗು ಪ್ರವಾಹ ಪೀಡಿತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ಕೊಡಗು ಪುನರ್ ನಿರ್ಮಾಣ ಪ್ರಾಧಿಕಾರ ರಚಿಸಬೇಕೆಂದು ಶಾಸಕ ಅಪ್ಪಚ್ಚು ರಂಜನ್ ಅವರು ಮನವಿ ಮಾಡಿಕೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next