Advertisement

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮುಂದಿನ ಗುರಿ: ಕಟೀಲ್‌

11:14 PM Aug 28, 2019 | Lakshmi GovindaRaj |

ಮೈಸೂರು: ಕಾಶ್ಮೀರ ವಿಚಾರದಲ್ಲಿ ನಾವು ಹೇಳಿದಂತೆ ನಡೆದುಕೊಂಡಿದ್ದೇವೆ. ಮುಂದಿನ ದಿನಗಳಲ್ಲಿ ಆಯೋಧ್ಯೆಯಲ್ಲಿ ರಾಮ ಮಂದಿರವನ್ನು ನಿರ್ಮಾಣ ಮಾಡುತ್ತೇವೆ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಹೇಳಿದರು. ಬುಧವಾರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದರು. ನಂತರ, ಸುತ್ತೂರು ಶ್ರೀ ಹಾಗೂ ಪೇಜಾವರ ಶ್ರೀಗಳ ಆಶೀರ್ವಾದ ಪಡೆದರು. ಬಳಿಕ, ನಗರದ ಬಿಜೆಪಿ ಕಚೇರಿಯಲ್ಲಿ ಏರ್ಪಡಿಸಿದ್ದ ಅಭಿನಂದನಾ ಸಭೆಯಲ್ಲಿ ಮಾತನಾಡಿದರು.

Advertisement

ಪ್ರಧಾನಿ ಮೋದಿ ಮತ್ತು ಅಮಿತ್‌ ಶಾ ಅವರು ನನ್ನ ಮೇಲೆ ವಿಶ್ವಾಸವನ್ನಿಟ್ಟು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಸಹಕಾರ ಮತ್ತು ಆಶೀರ್ವಾದ ನನ್ನ ಮೇಲಿದೆ ಎಂದರು. ಕಾಶ್ಮೀರವನ್ನು ಭಾರತದ ಅವಿಭಾಜ್ಯ ಅಂಗವನ್ನಾಗಿ ಮಾಡುತ್ತೇವೆ ಎಂದು ಹೇಳಿದ್ದೆವು. ಈಗ ಮಾತಿನಂತೆ ನಡೆದುಕೊಂಡಿದ್ದೇವೆ. ಹಾಗೆಯೇ, ಮುಂದಿನ ದಿನಗಳಲ್ಲಿ ಆಯೋಧ್ಯೆಯಲ್ಲಿ ರಾಮ ಮಂದಿರವನ್ನು ನಿರ್ಮಾಣ ಮಾಡುತ್ತೇವೆ. ಇದು ನಮ್ಮ ಗುರಿಯಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next