Advertisement

Ramanagar; ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ: ಶಾಸಕ ಇಕ್ಬಾಲ್ ಹುಸೇನ್

05:53 PM Jan 12, 2024 | Team Udayavani |

ರಾಮನಗರ: ರಾಮದೇವರ ಬೆಟ್ಟದಲ್ಲಿ ಅಭೂತಪೂರ್ವ ರಾಮಮಂದಿರ ಆಗುತ್ತದೆ. ರಾಮದೇವರ ಬೆಟ್ಟ ಅಭಿವೃದ್ಧಿಯ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಲಾಗಿದೆ. ರಾಮನ ಪಾದಸ್ಪರ್ಶ ಜಾಗದಲ್ಲಿ ಒಳ್ಳೆಯ ದೇಗುಲವಾಗುತ್ತದೆ ಎಂದು ರಾಮನಗರದಲ್ಲಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಪ್ರವಾಸೋದ್ಯಮ ಸಚಿವರ ಜೊತೆ ಚರ್ಚೆ ಮಾಡಲಾಗಿದೆ. ಮುಂದಿನ ಕ್ಯಾನಿನೆಟ್ ನಲ್ಲಿ ಹಣ ನಿಗಧಿ ಮಾಡಿ ಅಭಿವೃದ್ಧಿ ಮಾಡುತ್ತೇವೆ ಎಂದರು.

ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಗೈರಿಗೆ ಬಿಜೆಪಿ ಟೀಕೆ ವಿಚಾರಕ್ಕೆ ಮಾತನಾಡಿದ ಶಾಸಕ ಇಕ್ಬಾಲ್ ಹುಸೇನ್, ಬಿಜೆಪಿಯವರಿಗೆ ರಾಮನ ವಿಚಾರ ಹೊಸದು, ನಮಗಲ್ಲ. ಈ ಮಣ್ಣಿನಲ್ಲಿ ಎಲ್ಲಾ ಧರ್ಮಕ್ಕೂ ಗೌರವವಿದೆ. ಆದರೆ ಇದನ್ನ ರಾಜಕೀಯಕ್ಕೆ ಬಳಸಿಕೊಳ್ಳಬಾರದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next