Advertisement

ಚಿತ್ರದುರ್ಗ: ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ

03:38 PM Jan 17, 2021 | Team Udayavani |

ಚಿತ್ರದುರ್ಗ: ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನಕ್ಕೆ ಗಾರೆಹಟ್ಟಿಯಲ್ಲಿ ಚಾಲನೆ ನೀಡಲಾಯಿತು. ಜಿಲ್ಲೆಯಾದ್ಯಂತ ಎಲ್ಲಾ ಗ್ರಾಪಂ ಕೇಂದ್ರಗಳಲ್ಲಿ ಸಂಕ್ರಾಂತಿ ಉತ್ಸವ ನಂತರ ಮನೆ, ಮನೆಗೆ ಸಂಪರ್ಕ ಅಭಿಯಾನ ಪ್ರಾರಂಭಿಸಲಾಗಿದೆ ಎಂದು ಅಭಿಯಾನದ ಜಿಲ್ಲಾ ಮುಖ್ಯಸ್ಥ ರಾಜಕುಮಾರ್‌ ಮಾಹಿತಿ ನೀಡಿದ್ದಾರೆ.

Advertisement

ಇದನ್ನೂ ಓದಿ:ಪಣಜಿ: ತೆರೆದುಕೊಂಡ ಚಿತ್ರ ಜಗತ್ತು ; ಎರಡನೇ ದಿನ ಪರವಾಗಿಲ್ಲ

ಇಂದು ಮಹಿಳಾ ಕಾರ್ಯಕರ್ತೆಯರ ಅಭಿಯಾನ: ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ವತಿಯಿಂದ ಶ್ರೀರಾಮ ಮಂದಿರ ನಿರ್ಮಾಣ ನಿಧಿ  ಸಮರ್ಪಣಾ ಅಭಿಯಾನಕ್ಕೆ ಸಂಬಂಧಿಸಿದಂತೆ ಜ. 17 ರಂದು ಬೆಳಿಗ್ಗೆ 10:30ಕ್ಕೆ ಮಹಿಳಾ ಕಾರ್ಯಕರ್ತರ ಮನೆ ಮನೆ ಸಂಪರ್ಕ ಅಭಿಯಾನ ಚಾಲನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಚಿತ್ರನಟಿ ಮಾಳವಿಕಾ ಅವಿನಾಶ್‌ ಚಾಲನೆ ನೀಡಲಿದ್ದಾರೆ. ವಿ.ಪಿ. ಬಡಾವಣೆಯ 3ನೇ ಅಡ್ಡ ರಸ್ತೆಯ ಶ್ರೀ ಶಕ್ತಿ ಗಣಪತಿ ದೇವಾಲಯದ ಬಳಿಯ ವಿಶ್ವ ಹಿಂದೂ ಪರಿಷತ್‌ ಕಾರ್ಯಾಲಯದ ಹತ್ತಿರ   ನಡೆಯಲಿದೆ. ಹೆಚ್ಚಿನ ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಲು ಮನವಿ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next