Advertisement

TTD: ಪ್ರತೀ ರಾಜ್ಯದಲ್ಲಿ ತಿರುಪತಿ ದೇಗುಲ ನಿರ್ಮಾಣ!

11:15 PM Jun 25, 2023 | Team Udayavani |

ವಿಶಾಖಪಟ್ಟಣ: ದೇಶದ ಪ್ರತೀ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ತಿರುಪತಿ ಬಾಲಾಜಿ ದೇಗುಲ ನಿರ್ಮಿಸಲು ತಿರುಮಲ ತಿರುಪತಿ ದೇವಸ್ಥಾನಗಳ (ಟಿಟಿಡಿ) ಟ್ರಸ್ಟ್‌ ಮುಂದಾಗಿದೆ. ಜಮ್ಮುನ ಶಿವಾಲಿಕ್‌ ಕಾಡಿನಲ್ಲಿ 62 ಎಕ್ರೆ ಪ್ರದೇಶದಲ್ಲಿ ನಿರ್ಮಾಣವಾಗಿರುವ ವೆಂಕಟೇಶ್ವರ ಸ್ವಾಮಿ ದೇಗುಲವು ಇತ್ತೀಚೆಗೆ ಲೋಕಾರ್ಪಣೆಯಾಯಿತು. ಅಲ್ಲದೇ ಗುಜರಾತ್‌ ಮತ್ತು ಛತ್ತೀಸ್‌ಗಢದಲ್ಲಿ ತಿರುಪತಿ ಬಾಲಾಜಿ ದೇಗುಲ ನಿರ್ಮಾಣಕ್ಕೆ ಯೋಜನೆ ಸಿದ್ಧವಾಗಿದೆ.

Advertisement

ಈ ಕುರಿತು ಮಾಹಿತಿ ನೀಡಿದ ಟಿಟಿಡಿ ಅಧ್ಯಕ್ಷ ವೈ.ವಿ. ಸುಬ್ಟಾರೆಡ್ಡಿ, “ಭಗವಂತ ವೆಂಕಟೇಶ್ವರ ಸ್ವಾಮಿಯನ್ನು ಭಕ್ತರ ಮನೆಯ ಸಮೀಪ ಕೊಂಡೊಯ್ಯುವ ನಿಟ್ಟಿನಲ್ಲಿ ದೇಶದ ಪ್ರತೀ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ತಿರುಪತಿ ಬಾಲಾಜಿ ದೇಗುಲ ನಿರ್ಮಿಸಲು ಟಿಟಿಡಿ ನಿರ್ಧರಿಸಿದೆ’ ಎಂದು ತಿಳಿಸಿದ್ದಾರೆ. ಬಿಹಾರದಲ್ಲಿ ತಿರುಪತಿ ಬಾಲಾಜಿ ದೇಗುಲ ನಿರ್ಮಿಸಲು ನಿತೀಶ್‌ ಕುಮಾರ್‌ ಸರಕಾರದೊಂದಿಗೆ ಮಾತುಕತೆಯಲ್ಲಿ ಟಿಟಿಡಿ ತೊಡಗಿದೆ.

ಅಲ್ಲದೇ ನವೀಮುಂಬಯಿಯಲ್ಲಿ ದೇಗುಲ ನಿರ್ಮಿಸಲು ಟಿಟಿಡಿಗೆ 10 ಎಕ್ರೆ ಸ್ಥಳವನ್ನು ಮಹಾರಾಷ್ಟ್ರ ಸರಕಾರ ನೀಡಿದೆ. ಇಲ್ಲಿ 70 ಕೋಟಿ ರೂ. ವೆಚ್ಚದಲ್ಲಿ ದೇಗುಲ ನಿರ್ಮಾಣವಾಗಲಿದೆ. ಇತ್ತೀಚೆಗೆ ನಡೆದ ಮಂಡಳಿ ಸಭೆಯಲ್ಲಿ ಆಂಧ್ರಪ್ರದೇಶದ ತಿರುಪತಿಯ ವೆಂಕಟೇಶ್ವರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕಾರ್ಡಿಯೊ- ನ್ಯೂರೊ ಘಟಕ ಸ್ಥಾಪನೆಗೆ ಟಿಟಿಡಿ ಅನುಮೋದನೆ ನೀಡಿದೆ.

 

Advertisement

Udayavani is now on Telegram. Click here to join our channel and stay updated with the latest news.

Next