Advertisement

ಬಳಕೆದಾರರ ವೇದಿಕೆಯ ಮಾಜಿ ಸಂಚಾಲಕ, ಶಿಕ್ಷಣ ತಜ್ಞ ದಾಮೋದರ್ ಐತಾಳ್ ನಿಧನ

08:09 AM Dec 08, 2020 | keerthan |

ಉಡುಪಿ: ಶಿಕ್ಷಣ ತಜ್ಞ, ಬಳಕೆದಾರರ ವೇದಿಕೆಯ ಮಾಜಿ ಸಂಚಾಲಕ ಕೆ.ದಾಮೋದರ್ ಐತಾಳ್ (85) ಅವರು ಇಂದು ಬೆಳಿಗ್ಗೆ ವಯೋಸಹಜ ಅನಾರೋಗ್ಯದ ಕಾರಣದಿಂದ ನಿಧನರಾದರು.

Advertisement

ಉಡುಪಿ ಕಡಿಯಾಳಿ ನಿವಾಸಿಯಾದ ದಾಮೋದರ್ ಐತಾಳ್ ಅವರು ಕನ್ನಡ ಪಂಡಿತರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದರು. ನಿವೃತ್ತಿ ಬಳಿಕ ಪತ್ರಿಕಾ ವರದಿಗಾರನಾಗಿ, ಉಡುಪಿ ಪತ್ರಕರ್ತರ ಸಂಘದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.

ಮಂಗಳೂರು ಡಿಡಿಪಿಐ ಕಚೇರಿಯಲ್ಲಿ ವಿಷಯ ಪರಿವೀಕ್ಷಣಾ ಅಧಿಕಾರಿಯಾಗಿದ್ದ ಐತಾಳರು, ಉಡುಪಿ ಶಿಕ್ಷಕರ ಸಹಕಾರಿ ಬ್ಯಾಂಕ್ ನ ಕಾರ್ಯನಿರ್ವಾಹಕ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ.

ದಾಮೋದರ್ ಐತಾಳ್ ಅವರು ಉಡುಪಿ ಕೃಷ್ಣ ಮಠದ ಚಿನ್ನರ ಸಂತರ್ಪಣೆ ಯೋಜನೆಯ ಆರಂಭದಲ್ಲಿ ಸ್ಪೂರ್ತಿದಾಯಕರಾಗಿದ್ದರು. ವಯೋಸಹಜ ಅನಾರೋಗ್ಯದಿಂದ ಇಂದು ಬೆಳಿಗ್ಗೆ ಕಡಿಯಾಳಿಯಲ್ಲಿರುವ ಮಗಳ ಮನೆಯಲ್ಲಿ ನಿಧನರಾಗಿದ್ದಾರೆ. ಮೃತರು ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next