Advertisement

ಕಂಟೈನ್‌ ಮೆಂಟ್‌ ವಲಯ ರಚಿಸಿ : ಡೆಲ್ಟಾ + ಹಿನ್ನೆಲೆಯಲ್ಲಿ ಕೇಂದ್ರದಿಂದ ಪತ್ರ

01:06 AM Jun 27, 2021 | Team Udayavani |

ಬೆಂಗಳೂರು: ರಾಜ್ಯದಲ್ಲಿ ಡೆಲ್ಟಾ + ಸೋಂಕು ಕಂಡುಬಂದಿರುವಲ್ಲಿ ಕಂಟೈನ್‌ಮೆಂಟ್‌ ವಲಯ ರಚಿಸುವಂತೆ ಕೇಂದ್ರವು ಸೂಚನೆ ನೀಡಿದೆ.

Advertisement

ಈ ಕುರಿತು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್‌ ಭೂಷಣ್‌ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ಗೆ ಪತ್ರ ಬರೆದಿದ್ದಾರೆ. ಜನರು ಗುಂಪು ಸೇರುವುದನ್ನು ತಡೆಯಬೇಕು, ಪರೀಕ್ಷೆ ಹೆಚ್ಚಿಸಬೇಕು, ಲಸಿಕೆ ಹೆಚ್ಚಿಸಲು ಆದ್ಯತೆ ನೀಡುವಂತೆ ಸೂಚಿಸಿದ್ದಾರೆ.

ಗಂಭೀರ: ಪುರಾವೆಗಳಿಲ್ಲ
ಡೆಲ್ಟಾ + ಸೋಂಕು ಗಂಭೀರ ಪರಿಣಾಮ ಬೀರಲಿದೆ ಎಂಬುದಕ್ಕೆ ಪುರಾವೆಗಳಿಲ್ಲ ಎಂದು ಖ್ಯಾತ ವೈರಾಲಜಿಸ್ಟ್‌ ಶಹೀದ್‌ ಜಮಾಲ್‌ ಹೇಳಿದ್ದಾರೆ. ದೇಶದಲ್ಲಿ 50 ಸಾವಿರಕ್ಕೂ ಹೆಚ್ಚು ವಂಶವಾಹಿ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 49 ಡೆಲ್ಟಾ + ಪ್ರಕರಣ ಪತ್ತೆಯಾಗಿವೆ. ಒಬ್ಬರು ಮಾತ್ರ ಸಾವನ್ನಪ್ಪಿದ್ದಾರೆ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next