Advertisement

Bidar: ಔರಾದ- ಕಲುಷಿತ ನೀರು ಕುಡಿದು 18 ಜನ ಅಸ್ವಸ್ಥ  

02:47 PM Jun 20, 2023 | Team Udayavani |

ಔರಾದ: ಕಲುಷಿತ ನೀರು ಕುಡಿದು 18 ಜನ ಅಸ್ವಸ್ಥರಾದ ಘಟನೆ ತಾಲೂಕಿನ ಎಕಂಬಾ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಕರಕ್ಯಾಳ ಗ್ರಾಮದಲ್ಲಿ ನಡೆದಿದೆ.

Advertisement

ರವಿವಾರ ರಾತ್ರಿ ಕಲುಷಿತ ನೀರನ್ನು ಕುಡಿದು ಜನರಿಗೆ ವಾಂತಿ ಭೇದಿ ಶುರುವಾಗಿದೆ. ಇದರಿಂದ 18 ಜನರು ಅಸ್ವಸ್ಥಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಗ್ರಾಮಕ್ಕೆ ಕುಡಿಯುವ ನೀರು ಸರಿಯಾಗಿ ಸರಬರಾಜು ಆಗದ ಕಾರಣ. ಗ್ರಾಮದಲ್ಲಿರುವ ತೆರೆದ ಬಾವಿಯಿಂದ ನೇರವಾಗಿ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಇದರಿಂದಾಗಿಯೇ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಘಟನಾ ಸ್ಥಳಕ್ಕೆ ಕಾಂಗ್ರೆಸ್‌ ಮುಖಂಡ ಸುಧಾಕರ ಕೊಳ್ಳುರ ಭೇಟಿ ನೀಡಿ ಜನರ ಸಮಸ್ಯೆಯನ್ನು ಆಲಿಸಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next