Advertisement

Sagara ಮಾರಿಕಾಂಬಾ ವ್ಯವಸ್ಥಾಪಕ ಸಮಿತಿ ವಿರುದ್ಧ ನ್ಯಾಯಾಂಗ ನಿಂದನೆ

06:00 PM Nov 21, 2023 | Shreeram Nayak |

ಸಾಗರ: ಸದಸ್ಯರಿಗೆ ತಪ್ಪು ಮಾಹಿತಿ ನೀಡಿದ ಮಾರಿಕಾಂಬಾ ವ್ಯವಸ್ಥಾಪಕ ಸಮಿತಿ ವಿರುದ್ಧ ಮಾರಿಕಾಂಬಾ ಹಿತರಕ್ಷಣಾ ಸಮಿತಿ ನ. 20ರಂದು ನ್ಯಾಯಾಂಗ ನಿಂದನೆ ಅರ್ಜಿಯನ್ನು ದಾಖಲು ಮಾಡಿದೆ.

Advertisement

ಇಲ್ಲಿನ ಶೃಂಗೇರಿ ಶಂಕರಮಠದಲ್ಲಿ ನ. 19ರಂದು ಮಾರಿಕಾಂಬಾ ವ್ಯವಸ್ಥಾಪಕ ಸಮಿತಿ ಸರ್ವಸದಸ್ಯರ ಸಭೆಯನ್ನು ಕರೆದಿತ್ತು. ಆದರೆ ಜಿಲ್ಲಾ ನ್ಯಾಯಾಲಯದ ಆದೇಶದಂತೆ ದೇವಸ್ಥಾನದ ಸರ್ವಸದಸ್ಯರ ಸಭೆಯು ರದ್ದಾಗಿದೆ ಎಂದು ಸಮಿತಿ ಮರು ನೋಟಿಸ್ ಸದಸ್ಯರಿಗೆ ಕಳಿಸಿತ್ತು. ಆದರೆ ನ್ಯಾಯಾಲಯದಿಂದ ಈ ಸಂಬಂಧ ಸ್ಪಷ್ಟ ಆದೇಶವಾಗಿರಲಿಲ್ಲ.

ಈ ಹಿನ್ನೆಲೆಯಲ್ಲಿ ಮಾರಿಕಾಂಬಾ ಹಿತರಕ್ಷಣಾ ಸಮಿತಿ ನ್ಯಾಯಾಲಯದ ಹೆಸರಿನಲ್ಲಿ ತಪ್ಪು ಸಂದೇಶವನ್ನು ಸಾರ್ವಜನಿಕರಿಗೆ ನೀಡಿರುವ ಸಮಿತಿ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ನ್ಯಾಯಾಲಯಕ್ಕೆ ಮಾರಿಕಾಂಬಾ ಹಿತರಕ್ಷಣಾ ಸಮಿತಿ ಸಂಚಾಲಕ ಎಂ.ಡಿ.ಆನಂದ್ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯವು ಅರ್ಜಿ ವಿಚಾರಣೆಯನ್ನು ಡಿ. 5ಕ್ಕೆ ಮುಂದೂಡಿದೆ.

 

Advertisement

Udayavani is now on Telegram. Click here to join our channel and stay updated with the latest news.

Next