Advertisement

ನ್ಯಾಯಾಂಗ ನಿಂದನೆ ಪ್ರಕರಣ: ಇಂದು ಮಲ್ಯ ಶಿಕ್ಷೆ ಪ್ರಮಾಣ ನಿಗದಿ

08:35 AM Sep 05, 2022 | Team Udayavani |

ನವದೆಹಲಿ: ಬ್ಯಾಂಕುಗಳಿಗೆ ವಂಚಿಸಿ ದೇಶ ಬಿಟ್ಟು ಪರಾರಿಯಾಗಿರುವ ಉದ್ಯಮಿ ವಿಜಯ ಮಲ್ಯ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಶಿಕ್ಷೆಯ ಅವಧಿಯನ್ನು ಸೋಮವಾರ ಸುಪ್ರೀಂ ಕೋರ್ಟ್‌ ಪ್ರಕಟಿಸುವ ಸಾಧ್ಯತೆಯಿದೆ.

Advertisement

ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್‌ ಮತ್ತು ನ್ಯಾ. ರವೀಂದ್ರ ಭಟ್‌ ಅವರನ್ನೊಳಗೊಂಡ ನ್ಯಾಯಪೀಠವು ಮಾ.10ರಂದೇ ಈ ಪ್ರಕರಣದ ತೀರ್ಪನ್ನು ಕಾಯ್ದಿರಿಸಿತ್ತು.

ಬ್ಯಾಂಕುಗಳಿಗೆ 9 ಸಾವಿರ ಕೋಟಿ ರೂ. ವಂಚಿಸಿದ್ದಲ್ಲದೆ, ಕೋರ್ಟ್‌ ಆದೇಶದ ಹೊರತಾಗಿಯೂ ಮಲ್ಯ ಅವರು ತಮ್ಮ ಹೆಸರಲ್ಲಿದ್ದ ಆಸ್ತಿಯನ್ನು ತಮ್ಮ ಮಕ್ಕಳ ಹೆಸರಿಗೆ ವರ್ಗಾಯಿಸಿದ್ದರು. ಈ ಮೂಲಕ ಅವರು ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾ ನೇತೃತ್ವದ ಬ್ಯಾಂಕುಗಳ ಒಕ್ಕೂಟವು ಆರೋಪಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next