Advertisement

ಅಂಜನಿಪುತ್ರ ಪ್ರದರ್ಶನಕ್ಕೆ ನಿರ್ಬಂಧ ಮುಂದುವರಿಕೆ

01:57 PM Dec 29, 2017 | |

ಬೆಂಗಳೂರು: ಅಂಜನಿಪುತ್ರ ಸಿನಿಮಾ ಪ್ರದರ್ಶನ ನಿರ್ಬಂಧಕ್ಕೆ ಸಂಬಂಧಿಸಿದಂತೆ ಕೋರ್ಟ್‌ ಆದೇಶ ಉಲ್ಲಂ ಸಲಾಗಿದೆ ಎಂದು ಸಲ್ಲಿಕೆಯಾಗಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ಪುರಸ್ಕರಿಸಿರುವ ಸಿಟಿ ಸಿವಿಲ್‌ ನ್ಯಾಯಾಲಯ, ಮುಂದಿನ ವಿಚಾರಣೆಯವರೆಗೂ ಅಂಜನಿಪುತ್ರ ಚಿತ್ರ ಪ್ರದರ್ಶನಕ್ಕೆ ನಿರ್ಬಂಧ ಹೇರುವಂತೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ಆದೇಶಿಸಿದೆ.

Advertisement

ಈ ಕುರಿತು ವಕೀಲ ನಾರಾಯಣಸ್ವಾಮಿ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿರುವ ನ್ಯಾಯಪೀಠ, ಈ ಹಿಂದೆ ಚಿತ್ರ ಪ್ರದರ್ಶನಕ್ಕೆ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದ ಆದೇಶವನ್ನು ಪ್ರತಿವಾದಿಗಳು ಉಲ್ಲಂಘಿಸಿದ್ದಾರೆ. ಇಂದಿನ ವಿಚಾರಣೆಗೂ ಹಾಜರಾಗಿ ಸ್ಪಷ್ಟೀಕರಣ ನೀಡಿಲ್ಲ. ಈ ಕ್ರಮ ಸರಿಯಾಗಿಲ್ಲ ಎಂದು ಅಭಿಪ್ರಾಯಪಟ್ಟಿತು. ಮುಂದಿನ ವಿಚಾರಣೆಯವರೆಗೂ ಚಿತ್ರ ಪ್ರದರ್ಶನಕ್ಕೆ ನಿರ್ಬಂಧ ವಿಧಿಸಬೇಕು. ಪ್ರತಿವಾದಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಡಿಜಿಪಿಗೆ ನಿರ್ದೇಶಿಸಿ ನೋಟಿಸ್‌ ಜಾರಿಗೊಳಿಸಿ ವಿಚಾರಣೆ ಮುಂದೂಡಿತು. 

Advertisement

Udayavani is now on Telegram. Click here to join our channel and stay updated with the latest news.

Next