Advertisement

ಮಳೆಯಲ್ಲೂ ಮುಂದುವರಿದ ಧರಣಿ

02:50 PM Aug 01, 2018 | |

ಬೆಂಗಳೂರು: ಅನುದಾನಕ್ಕೆ ಒಳಪಡಿಸಬೇಕು ಎಂದು ಆಗ್ರಹಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಶಾಲಾ ಶಿಕ್ಷಕರು ನಡೆಸುತ್ತಿರುವ ಪ್ರತಿಭಟನೆ ಹದಿನೈದು ದಿನ ಪೂರೈಸಿದ್ದರೂ, ಸರ್ಕಾರದಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲ.

Advertisement

ಮಂಗಳವಾರ ಸಂಜೆ ಮಳೆಯ ನಡುವೆಯೂ ಶಿಕ್ಷಕರು ಪ್ರತಿಭಟನೆ ನಡೆಸಿದ್ದು, ಸರ್ಕಾರದಿಂದ ಸೂಕ್ತ ಉತ್ತರ ಬರುವವರೆಗೂ ಹೋರಾಟ ನಿರಂತರವಾಗಿರುತ್ತದೆ ಎಂದು ಎಚ್ಚರಿಕೆ ನೀಡಿದರು. 1987ರಿಂದ 1994-95ರ ಅವಧಿಯಲ್ಲಿ ಆರಂಭವಾಗಿರುವ ಸಾವಿರಾರು ಶಾಲೆಗಳಿಗೆ ಸರ್ಕಾರ ವೇತನಾನುದಾನ ನೀಡಿದೆ. ಇದೇ ಅವಧಿಯಲ್ಲಿ ಆರಂಭವಾದ ಸುಮಾರು 87 ಶಾಲೆಗಳನ್ನು ಸರ್ಕಾರ ವೇತನಾನುದಾನಕ್ಕೆ ಒಳಪಡಿಸಿಲ್ಲ.

ಈ ಶಾಲೆಗಳ ಕಡತ ಆರ್ಥಿಕ ಇಲಾಖೆಯಿಂದ ವಾಪಾಸ್‌ ಬಂದಿದೆ. ಇದರಿಂದ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಾವಿರಾರು ಶಿಕ್ಷಕರ ಕುಟುಂಬ ಬೀದಿಗೆ ಬಂದಿದೆ. ವೇತನಾನುದಾನಕ್ಕೆ ಆಗ್ರಹಿಸಿ 15 ದಿನದಿಂದ ಸ್ವಾತಂತ್ರ
ಉದ್ಯಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ. ಆದರೂ, ಸರ್ಕಾರ ದಿಂದ ಯಾವುದೇ ಉತ್ತರ ಸಿಕ್ಕಿಲ್ಲ ಎಂದು ರಾಜ್ಯ ಅನುದಾನಕ್ಕೆ ಒಳಪಡುತ್ತಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಒಕ್ಕೂಟದ ಅಧ್ಯಕ್ಷ ವರದರಾಜ್‌ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next