Advertisement
ಪ್ರಸ್ತುತ ಕಾನೂನು ಮತ್ತು ಸುವ್ಯವಸ್ಥೆ ಸ್ಥಿತಿಗತಿಯನ್ನು ಗಣನೆಗೆ ತೆಗೆದುಕೊಂಡು ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ತಿಳಿಸಿದ್ದಾರೆ. ಆದರೆ, ಜಮ್ಮು-ಕಾಶ್ಮೀರ ಹಾಗೂ ಪಿಒಕೆ ನಡುವಿನ ಪ್ರಯಾಣ ಮತ್ತು ವ್ಯಾಪಾರಕ್ಕೆ ತಡೆ ಹೇರುವಂತೆ ಕೇಂದ್ರ ಗೃಹ ಸಚಿವಾಲಯದಿಂದ ಸೂಚನೆ ಬಂದಿತ್ತು ಎಂದು ಮೂಲಗಳು ತಿಳಿಸಿದೆ. ಪುಲ್ವಾಮಾ ದಾಳಿಯ ಬೆನ್ನಲ್ಲೇ ಪಾಕಿಸ್ಥಾನಕ್ಕೆ ನೀಡಿದ್ದ ಪರಮಾಪ್ತ ರಾಷ್ಟ್ರ ಸ್ಥಾನಮಾನವನ್ನು ಮತ್ತು ಪ್ರತ್ಯೇಕತಾವಾದಿಗಳಿಗೆ ನೀಡಿದ್ದ ಭದ್ರತೆಯನ್ನು ವಾಪಸ್ ಪಡೆದ ಬೆನ್ನಲ್ಲೇ ಸರಕಾರದಿಂದ ಈ ನಿರ್ಧಾರ ಹೊರಬಿದ್ದಿದೆ. ಅಲ್ಲದೆ ಪಾಕಿಸ್ಥಾನವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಏಕಾಂಗಿಯಾಗಿಸುವ ಯತ್ನವನ್ನೂ ಭಾರತ ಮುಂದುವರಿಸಿದೆ.
ಮಹತ್ವದ ಬೆಳವಣಿಗೆಯಲ್ಲಿ ಹೊಸದಿಲ್ಲಿಯಲ್ಲಿರುವ ತನ್ನ ಹೈಕಮಿಷನರ್ ಸೊಹೈಲ್ ಮೊಹಮ್ಮದ್ರನ್ನು ಪಾಕ್ ಸರಕಾರ ಸ್ವದೇಶಕ್ಕೆ ಕರೆಯಿಸಿಕೊಂಡಿದೆ. ಪುಲ್ವಾಮ ಘಟನೆಗೆ ಸಂಬಂಧಿಸಿದಂತೆ ಭಾರತದ ವಿದೇಶಾಂಗ ಇಲಾಖೆ ಸೊಹೈಲ್ರನ್ನು ಕರೆಯಿಸಿಕೊಂಡು ಪ್ರಬಲ ಆಕ್ಷೇಪ ವ್ಯಕ್ತಪಡಿಸಿರುವಂತೆಯೇ ಈ ಬೆಳವಣಿಗೆ ನಡೆದಿದೆ. ಈ ಬಗ್ಗೆ ಪಾಕ್ ವಿದೇಶಾಂಗ ಇಲಾಖೆ ವಕ್ತಾರ ಮೊಹಮ್ಮದ್ ಫೈಸಲ್ ಟ್ವೀಟ್ ಮಾಡಿದ್ದಾರೆ.
Related Articles
ಅಖೀಲೇಶ್ ಯಾದವ್, ಸಮಾಜವಾದಿ ಪಕ್ಷದ ನಾಯಕ
Advertisement
ಪುಲ್ವಾಮಾ ಘಟನೆಯ ನಂತರವೂ ಯೋಧರ ಆತ್ಮಸ್ಥೈರ್ಯ ಗಟ್ಟಿಯಾಗಿದೆ. ಮುಂಬರುವ ದಿನಗಳಲ್ಲಿ ಉಗ್ರರನ್ನು ನಿಗ್ರಹಿಸುವ ವಿಚಾರದಲ್ಲಿ ಅವರು ಖಂಡಿತವಾಗಿಯೂ ಯಶಸ್ವಿಯಾಗುತ್ತಾರೆ. ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಪ್ರಮುಖ ರಾಜಕೀಯ ಪಕ್ಷಗಳೇ ಭಾರತ ವಿರೋಧಿ ಹೇಳಿಕೆಗಳನ್ನು ನೀಡಿ, ಕಾಶ್ಮೀರಿಗರನ್ನು ದಾರಿ ತಪ್ಪಿಸುತ್ತಿವೆ. ಮೊದಲು ಎನ್ಸಿ ಮತ್ತು ಪಿಡಿಪಿಗೆ ಸೇರಿದ ಅಂಥ ನಾಯಕರ ವಿರುದ್ಧ ತನಿಖೆಯಾಗಬೇಕು.
ಕವೀಂದರ್ ಗುಪ್ತಾ, ಬಿಜೆಪಿ ನಾಯಕ ಯಾವುದೇ ರಾಜಕೀಯ “ಅಲೆ’ ಈವರೆಗೆ ಕಾಶ್ಮೀರ ವಿವಾದವನ್ನು ಇತ್ಯರ್ಥಪಡಿಸಿಲ್ಲ ಅಥವಾ ನಮ್ಮ ಯೋಧರ ಸಾವನ್ನು ತಡೆದಿಲ್ಲ. ಇದು ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಪಾಕ್ ಮೇಲೆ ದಾಳಿ ನಡೆಸಬೇಕಾದ ಸಮಯವೇ ಹೊರತು, ರಾಜಕೀಯ ಶತ್ರುಗಳ ವಿರುದ್ಧ ಸರ್ಜಿಕಲ್ ದಾಳಿ ನಡೆಸುವ ಸಮಯವಲ್ಲ.
ಉದ್ಧವ್ ಠಾಕ್ರೆ , ಶಿವಸೇನೆ ಮುಖ್ಯಸ್ಥ ಪುಲ್ವಾಮಾದಲ್ಲಿ ಮಡಿದ ನಮ್ಮ 41 ಯೋಧರ ಸಾವಿಗೆ ಪ್ರತೀಕಾರವಾಗಿ ಪಾಕಿಸ್ಥಾನದ 82 ಯೋಧರ ಹತ್ಯೆಗೈಯ್ಯ ಬೇಕು. ಪಾಕ್ ಪ್ರಧಾನಿ ಇಮ್ರಾನ್ ಖಾನ್ ಕೂಡ ಅಲ್ಲಿಯ ಮಿಲಿಟರಿಯ ಒಂದು ಉತ್ಪನ್ನವೇ. ಕೂಡಲೇ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.
ಕ್ಯಾ. ಅಮರೀಂದರ್ ಸಿಂಗ್, ಪಂಜಾಬ್ ಮುಖ್ಯಮಂತ್ರಿ ಭಯೋತ್ಪಾದನೆ ವಿರುದ್ಧ ಸಮರ ಸಾರುವ ವಿಚಾರದಲ್ಲಿ ವಿಶ್ವದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ರಾಜಕೀಯ ನಾಯಕತ್ವಕ್ಕೆ ಸಮಾನ ಯಾರೂ ಇಲ್ಲ.
ಅಮಿತ್ ಶಾ, ಬಿಜೆಪಿ ಅಧ್ಯಕ್ಷ