Advertisement

6 ವರ್ಷದಿಂದ ಸಂಬಳವೇ ಇಲ್ಲ: ಮನನೊಂದು ತಾ.ಪಂ ಕಚೇರಿಯಲ್ಲೇ ನೇಣಿಗೆ ಶರಣಾದ ಗುತ್ತಿಗೆ ನೌಕರ

06:15 PM Jun 28, 2022 | Team Udayavani |

ಮುಧೋಳ : ರಾಜೀವ್ ಗಾಂಧಿ ವಸತಿ ನಿಗಮದ ಗುತ್ತಿಗೆ ಆಧಾರದ ನೌಕರ ತಾನು ಕಾರ್ಯನಿರ್ವಹಿಸುತ್ತಿದ್ದ ತಾಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ಆತ್ಮಹತ್ಯೆ ಶರನಾಗಿದ್ದಾನೆ.

Advertisement

ರಾಯಚೂರು ಜಿಲ್ಲೆ ಲಿಂಗಸ್ಗೂರು ತಾಲೂಕಿನ ಚಿಕ್ಕ ಹೆಸರೂರ ಗ್ರಾಮದ ಬಸಣ್ಣ ಪಟ್ಟೇದ (42) ಆತ್ಮಹತ್ಯೆ ಮಾಡಿಕೊಂಡಿರುವ ನೌಕರ.

ಇದನ್ನೂ ಓದಿ: ಉಡುಪಿ: ಪೋಷಕರಲ್ಲಿ ಅಪಹರಣದ ನಾಟಕವಾಡಿ 5 ಲಕ್ಷಕ್ಕೆ ಬೇಡಿಕೆ ಇಟ್ಟ ಮಗ: ಕೊನೆಗೆ ಆಗಿದ್ದೇ ಬೇರೆ

ಕಳೆದ 10 ವರ್ಷದಿಂದ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದ ಬಸಣ್ಣಗೆ 6‌ ವರ್ಷದಿಂದ ವೇತನವಾಗಿರಲಿಲ್ಲ ಎಂಬ ಮಾಹಿತಿ ಇದೆ.

ಸೋಮವಾರ ರಾತ್ರಿ ತಾಲೂಕು ಪಂಚಾಯಿತಿ ಕಾರ್ಯಾಲದಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next