Advertisement

ಗುತ್ತಿಗೆದಾರ ಆತ್ಮಹತ್ಯೆ: ಇಲಾಖಾ ತನಿಖೆ; ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಆದೇಶ

09:33 AM Jun 01, 2024 | Shreeram Nayak |

ಬೆಂಗಳೂರು: ಸಂತೆಬೆನ್ನೂರಿನ ಗುತ್ತಿಗೆದಾರ ಪಿ.ಎಸ್‌. ಗೌಡರ್‌ ಆತ್ಮಹತ್ಯೆ ಪ್ರಕರಣದ ಇಲಾಖಾ ತನಿಖೆಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಆದೇಶಿಸಿದ್ದಾರೆ. ಕೃಷಿ ಇಲಾಖೆ ಕಾಮಗಾರಿ ನಡೆಸಿದ್ದರೂ ಹಣ ಬಿಡುಗಡೆ ಮಾಡದೆ ಕೆಆರ್‌ಐಡಿಎಲ್‌ ಅಧಿಕಾರಿಗಳು ಸತಾಯಿಸಿದ್ದಾರೆ ಎಂದು ಗೌಡರ್‌ ತಮ್ಮ ಮರಣಪತ್ರದಲ್ಲಿ ಬರೆದಿಟ್ಟಿದ್ದರು.

Advertisement

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಮಾಹಿತಿ ನೀಡಿರುವ ಸಚಿವರು, ಪ್ರಕರಣ ಸಂಬಂಧ ತನಿಖೆ ನಡೆಸಿ ವರದಿ ಸಲ್ಲಿಸಲು ಹಿರಿಯ ಅಧಿಕಾರಿಗಳ ಸಮಿತಿ ರಚಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಚನ್ನಗಿರಿ ತಾಲೂಕಿನ ಸಂತೇಬೆನ್ನೂರಿನ ಕೃಷಿ ಇಲಾಖೆ ಕಚೇರಿ ಆವರಣದಲ್ಲಿ ಕೈಗೊಂಡ ಕಾಮಗಾರಿಯ 40 ಲಕ್ಷ ರೂ. ಹಣ ಸಕಾಲದಲ್ಲಿ ಬಿಡುಗಡೆಯಾಗದೆ ಮನನೊಂದ ಗೌಡರ್‌ ಆತ್ಮಹತ್ಯೆಗೆ ಶರಣಾಗಿದ್ದರು.

2023-24ನೇ ಸಾಲಿನಲ್ಲಿ ಕೆಲಸ ಮಾಡಿದ್ದ ಕಾಮಗಾರಿಗೆ ಸಂಬಂಧಿ ಸಿ ಹಣ ಬಿಡುಗಡೆಗೆ ಅಧಿ ಕಾರಿಗಳು ಸತಾಯಿಸುತ್ತಿದ್ದರು. ಅಧಿಕಾರಿಗಳ ಧೋರಣೆಗೆ ಬೇಸತ್ತು ಆತ್ಮಹತ್ಯೆ ಮಾಡಿ ಕೊಂಡಿರುವುದಾಗಿ ಡೆತ್‌ನೋಟ್‌ನಲ್ಲಿ ಬರೆಯಲಾಗಿದೆ. ಪತಿಯ ಸಾವಿನ ಕುರಿತು ಪತ್ನಿ ವಸಂತಕುಮಾರಿ ಸಂತೇಬೆನ್ನೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next