Advertisement

ಗುತ್ತಿಗೆದಾರ ಸಂತೋಷ್ ಮೃತದೇಹ ಶಾಂಭವಿ ಲಾಡ್ಜ್ ನಿಂದ ಮಣಿಪಾಲ ಆಸ್ಪತ್ರೆ ಶವಾಗಾರಕ್ಕೆ ರವಾನೆ

05:28 PM Apr 13, 2022 | Team Udayavani |

ಉಡುಪಿ: ಗುತ್ತಿಗೆದಾರ ಸಂತೋಷ್ ಮೃತದೇಹವನ್ನು ಶಾಂಭವಿ ಲಾಡ್ಜ್ ನಿಂದ ಮಣಿಪಾಲದ ಕೆಎಂಸಿ ಆಸ್ಪತ್ರೆ ಶವಾಗಾರಕ್ಕೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.

Advertisement

ಸ್ಥಳ ಮಹಜರ್,ಪಂಚನಾಮೆ ಬಳಿಕ ಮೃತದೇಹವನ್ನು ಮಣಿಪಾಲದ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದ್ದು,ಅಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ.

ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ಸಚಿವ ಈಶ್ವರಪ್ಪ ಅವರ ಮೇಲೆ ಕಮಿಷನ್ ಆರೋಪವನ್ನು ಮಾಡಿದ್ದರು.

ಈ ಬಗ್ಗೆ ಮೃತ ಸಂತೋಷ್ ಸಹೋದರ ನೀಡಿದ ದೂರಿನ ಮೇಲೆ ಸಚಿವ ಈಶ್ವರಪ್ಪ ವಿರುದ್ಧ ಎಫ್ ಐ ಆರ್ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next