Advertisement
ನಗರದ ಹೊರ ವಲಯದ ಚದಲಪುರ ಕ್ರಾಸ್ನಲ್ಲಿರುವ ಕೆನರಾ ಬ್ಯಾಂಕ್ನ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜಿಲ್ಲಾ ಪಶು ವೈದ್ಯಕೀಯ ಸಂಘ ಹಮ್ಮಿಕೊಂಡಿದ್ದ ವಿಶ್ವ ಪಶುವೈದ್ಯ ದಿನಾಚರಣೆಯಲ್ಲಿ ಅವರು ಮಾತನಾಡಿದರು.
Related Articles
Advertisement
ಪ್ರತಿದಿನ ಗ್ರಾಮೀಣ ಭಾಗಕ್ಕೆ ಭೇಟಿ ನೀಡಿ ರೈತರ ಆರ್ಥಿಕಾಭಿವೃದ್ಧಿಗೊಳಿಸುವಲ್ಲಿ ಪಶುವೈದ್ಯರು ಮಹತ್ವ ಪಾತ್ರ ವಹಿಸುತ್ತಿದ್ದಾರೆ. ರೈತರು ಕೂಡ ಪಶು ವೈದ್ಯರ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದು, ಪಶು ಸಂಪತ್ತುನ್ನು ಉಳಿಸಿ, ಬೆಳೆಸಬೇಕು. ಇಲಾಖೆಯಲ್ಲಿ ರೈತರಿಗೆ ಸಾಕಷ್ಟು ಸಾಲ, ಸೌಲಭ್ಯಗಳಿದ್ದು, ಪಶು ವೈದ್ಯರು ಗ್ರಾಮೀಣ ಪ್ರದೇಶಕ್ಕೆ ತೆರಳಿದಾಗ ಅರಿವು ಮೂಡಿಸಬೇಕು ಎಂದು ಮನವಿ ಮಾಡಿದರು.
ಆಹಾರ ಸುರಕ್ಷತೆ: ಜಿಲ್ಲೆಯ ಪಶು ವೈದ್ಯರಿಗೆ ಎನ್ಡಿಆರ್ಐನ ಹಿರಿಯ ನಿರ್ದೇಶಕ ಡಾ. ಸಿದ್ದರಾಮಣ್ಣ , ಆಹಾರ ಸಂರಕ್ಷತೆಯಲ್ಲಿ ಪಶುವೈದ್ಯರ ಪಾತ್ರದ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ಈ ವೇಳೆ ಪಶು ವೈದ್ಯ ಇಲಾಖೆಯಿಂದ ವೈದ್ಯರಿಗೆ ಹಲವು ಉಪಯುಕ್ತವಾದ ಮಾಹಿತಿಗಳನ್ನು ಪ್ರಾತ್ಯಕ್ಷಿಕೆ ಮೂಲಕ ಅರಿವು ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಪಶು ವೈದ್ಯರ ಸಂಘದ ಜಿಲ್ಲಾಧ್ಯಕ್ಷ ಡಾ. ಭೈರಾರೆಡ್ಡಿ, ಜಿಲ್ಲಾ ಪಾಲಿ ಕ್ಲಿನಿಕ್ ಉಪ ನಿರ್ದೇಶಕ ಡಾ. ಗೋವಿಂದಪ್ಪ, ಕೆನರಾ ಬ್ಯಾಂಕ್ ಸ್ವಯಂ ಉದ್ಯೋಗ ತರಬೇತಿ ಕೇಂದ್ರದ ನಿರ್ದೇಶಕ ನಾರಾಯಣಸ್ವಾಮಿ, ಜಿಲ್ಲಾ ಪಶುವೈದ್ಯಕೀಯ ಸಂಘದ ಪ್ರಧಾನ ಕಾಯ