Advertisement

ಸೋಂಕಿತರ ಸಾವು ಪ್ರಕರಣ ನಿಯಂತ್ರಿಸಿ

09:23 AM Jul 10, 2020 | Suhan S |

ಬೀದರ: ಕೋವಿಡ್‌-19 ಎಲ್ಲ ಕಾರ್ಯ ಚಟುವಟಿಕೆಗಳು ಜಿಲ್ಲೆಯಲ್ಲಿ ನಿಯಮಿತ ಮತ್ತು ಅಚ್ಚುಕಟ್ಟಾಗಿ ನಡೆಯಬೇಕು. ಕೋವಿಡ್‌ ವೈರಾಣು ಸೋಂಕಿತ ಸಾವಿನ ಪ್ರಕರಣಗಳು ನಿಯಂತ್ರಣಕ್ಕೆ ಬರಲು ವೈರಾಣು ತಡೆ ಕ್ರಮಗಳನ್ನು ತೀವ್ರಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ| ರಿಚರ್ಡ್‌ ವಿನ್ಸೆಂಟ್‌ ಡಿಸೋಜಾ ಸೂಚಿಸಿದರು.

Advertisement

ನಗರದ ಡಿಸಿ ಕಚೇರಿಯಲ್ಲಿ ಜಿಲ್ಲಾಧಿಕಾರಿ, ಜಿಪಂ ಸಿಇಒ ಹಾಗೂ ಎಸ್‌ಪಿ ಸೇರಿ ತಾಲೂಕು ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಅವರು ಮಾತನಾಡಿದರು. ಕಂಟೇನ್ಮೆಂಟ್‌ ಝೋನ್‌ನಲ್ಲಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಂದ ಮನೆ ಮನೆ ಸಮೀಕ್ಷೆ ಕಾರ್ಯ ನಡೆಯುತ್ತಿದೆ. ಐಎಲ್‌ಐ ಮತ್ತು ಸಾರಿ ಪ್ರಕರಣಗಳ ಪಟ್ಟಿ ಮಾಡಿ ಗಂಟಲು ದ್ರವದ ಮಾದರಿ ಪರೀಕ್ಷಾ ಕಾರ್ಯ ನಿಯಮಿತವಾಗಿ ನಡೆಯುತ್ತಿದೆ.

ಹೋಂ ಕ್ವಾರಂಟೈನದಲ್ಲಿರುವವರ ಬಗ್ಗೆ ನಿಗಾ ಇಡಲಾಗಿದೆ. ಕ್ವಾರಂಟೈನ್‌ ನಿಯಮ ಉಲ್ಲಂಘಿಸುವವರ ಮೇಲೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಡಿಸಿ ಆರ್‌. ರಾಮಚಂದ್ರನ್‌ ಮಾಹಿತಿ ನೀಡಿದರು. ಕೋವಿಡ್‌-19 ನಿಗದಿತ ಆಸ್ಪತ್ರೆಯಲ್ಲಿ ಅಗತ್ಯಕ್ಕೆ ತಕ್ಕಂತೆ ಮಾಸ್ಕ್, ಪಿಪಿಟಿ ಕಿಟ್‌ ಸೇರಿದಂತೆ ಎಲ್ಲ ರೀತಿಯ ವೈದ್ಯಕೀಯ ಸೌಕರ್ಯದ ಲಭ್ಯತೆ ಇದೆ ಎಂದು ಸಿಇಒ ಗ್ಯಾನೆಂದ್ರಕುಮಾರ ಗಂಗವಾರ ಮಾಹಿತಿ ನೀಡಿದರು.

ಎಸ್‌ಪಿ ಡಿ.ಎಲ್‌.ನಾಗೇಶ, ಡಿಎಚ್‌ಒ ಡಾ| ವಿ.ಜಿ. ರೆಡ್ಡಿ, ಬ್ರಿಮ್ಸ್‌ ನಿರ್ದೇಶಕ ಡಾ| ಶಿವಕುಮಾರ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ| ರತಿಕಾಂತ ಸ್ವಾಮಿ, ವೈದ್ಯಾಧಿಕಾರಿಗಳಾದ ವಿಜಯಕುಮಾರ ಅಂತಪ್ಪನವರ, ದೀಪಾ ಖಂಡ್ರೆ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next