Advertisement

ಅಪ್ಪುಬಗ್ಗೆ ಆಕ್ಷೇಪಾರ್ಹ ಪೋಸ್ಟ್‌: ಆರೋಪಿ ಸೆರೆ

10:43 AM Nov 03, 2021 | Team Udayavani |

ಬೆಂಗಳೂರು: ಸಾಮಾಜಿಕ ಜಾಲತಾಣ ದಲ್ಲಿ ಸ್ಯಾಂಡಲ್‌ವುಡ್‌ ನಟ ಪುನೀತ್‌ ರಾಜ್‌ಕುಮಾರ್‌ ಕುರಿತು ಅವಹೇಳನಕಾರಿ ಪೋಸ್ಟ್‌ ಹಾಕಿದ ವಿದ್ಯಾರ್ಥಿಯೊಬ್ಬನನ್ನು ಸುಬ್ರಹ್ಮಣ್ಯನಗರ ಪೊಲೀಸರು ಬಂಧಿಸಿದ್ದಾರೆ. ಸುಬ್ರಹ್ಮಣ್ಯನಗರ ನಿವಾಸಿ ರಿತ್ವಿಕ್‌(21) ಬಂಧಿತ ವಿದ್ಯಾರ್ಥಿ.ಆರೋಪಿ ನಗರದ ಖಾಸಗಿ ಕಾಲೇಜೊಂದರಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದಾನೆ.

Advertisement

ಪುನೀತ್‌ ರಾಜ್‌ ನಿಧನದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸ ದಿರಲಿ ಎಂಬ ಕಾರಣಕ್ಕೆ ನಗರ ಪೊಲೀಸ್‌ ಆಯುಕ್ತ ಕಮಲ್‌ಪಂತ್‌, ಅ.29ರಿಂದ 31ರ ಮಧ್ಯರಾತ್ರಿ 12 ಗಂಟೆಯವರೆಗೆ ಪಬ್‌, ಬಾರ್‌, ಮದ್ಯದ ಅಂಗಡಿಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ಆದೇಶಿಸಿದ್ದರು. ಅದನ್ನು ಆಕ್ಷೇಪಿಸಿದ್ದ ಕಿಡಿಗೇಡಿ ರಿತ್ವಿಕ್‌, ಅಕ್ರಮವಾಗಿ ಮದ್ಯ ಖರೀದಿಸಿ ತನ್ನ ಕಾರಿನಲ್ಲಿ ತಾನು ಮದ್ಯ ಸೇವಿಸುವ ಫೋಟೋವನ್ನು ಸಾಮಾಜಿಕ ಜಾಲತಾಣ ಇನ್‌ಸ್ಟ್ರಾಗ್ರಾಂನಲ್ಲಿ ಹಾಕಿ ನನಗೆ ಯಾರು ಲೆಕ್ಕವಿಲ್ಲ.

ಇದನ್ನೂ ಓದಿ:- ಸೋಲಿನ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ :  ಸಿಎಂ ಬೊಮ್ಮಾಯಿ

ಜತೆಗೆ ಪುನೀತ್‌ ರಾಜ್‌ ಕುಮಾರ್‌ ಬಗ್ಗೆ ಅವಾಚ್ಯ ಶಬ್ದಗಳನ್ನು ಬಳಸಿ ಬರೆದಿದ್ದ. ಅಲ್ಲದೆ, ರಾಜ್‌ಕುಮಾರ್‌ ತಡೆಯಲು ಸಾಧ್ಯವಿಲ್ಲ ಎಂದು ಪೋಸ್ಟ್‌ ಹಾಕಿದ್ದ.ಅದರಿಂದ ಆಕ್ರೋಶಗೊಂಡ ಅಪ್ಪು ಅಭಿಮಾನಿಗಳು ರಿತ್ವಿಕ್‌ ಮಾಡಿದ್ದ ಪೋಸ್ಟ್‌ ಅನ್ನು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ಗೆ ಟ್ಯಾಗ್‌ ಮಾಡಿ ಕಾನೂನು ಕ್ರಮಕೈಗೊಳ್ಳ ಬೇಕು ಎಂದು ಒತ್ತಾಯಿಸಿದ್ದರು.

ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಆಯುಕ್ತರು ಕೂಡಲೇ ಆರೋಪಿ ಪತ್ತೆ ಮಾಡುವಂತೆ ಸೈಬರ್‌ ಕ್ರೈಂ ಪೊಲೀಸರಿಗೆ ಸೂಚಿಸಿದ್ದರು. ಸೋಮವಾರ ಮಧ್ಯಾಹ್ನದ ವೇಳೆ ತಾಂತ್ರಿಕ ಕಾರ್ಯಾಚರಣೆ ನಡೆಸಿದಾಗ ಆತ ಸುಬ್ರಹ್ಮಣ್ಯನಗರ ನಿವಾಸಿ ಎಂಬುದು ಪತ್ತೆಯಾಗಿತ್ತು. ಬಳಿಕ ಆತನನ್ನು ಸುಬ್ರಹ್ಮಣ್ಯನಗರ ಪೊಲೀಸರು ಬಂಧಿ ಸಿದ್ದು, ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next