Advertisement

ವಿವಾದಿತ ಪೋಸ್ಟ್: ಎಂಇಎಸ್ ಮುಖಂಡ ಶುಭಂ ಶೇಳಕೆ ವಿರುದ್ಧ ದೂರು ದಾಖಲು

01:34 PM May 06, 2022 | Team Udayavani |

ಬೆಳಗಾವಿ: ಬೆಳಗಾವಿ, ಬೀದರ, ಬಾಲ್ಕಿ, ಕಾರವಾರ, ನಿಪ್ಪಾಣಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಿದ ಗ್ರಾಫಿಕ್ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದ ಮಹಾರಾಷ್ಟ್ರ ಏಕೀಕರಣ ಸಮಿತಿ ಯುವ ಘಟಕ ಅಧ್ಯಕ್ಷ ಶುಭಂ ಶೇಳಕೆ ವಿರುದ್ಧ ಎಫ್ಐಆರ್ ದಾಖಲಾಗಿದೆ.

Advertisement

ಮೇ 1 ಮಹಾರಾಷ್ಟ್ರ ದಿನ ನಿಮಿತ್ತ ಸಾಮಾಜಿಕ ಜಾಲತಾಣದಲ್ಲಿ ಬೆಳಗಾವಿ ಗಡಿ ಭಾಗದ ವಿವಾದಿತ ನಕ್ಷೆ ತಯಾರಿಸಿ ಅಪ್ಲೋಡ್ ಮಾಡಿದ್ದು, ಇದು ಕನ್ನಡಿಗರನ್ನು ಕೆಣಕಿಸಿತ್ತು. ಈ ಬಗ್ಗೆ ಕರವೇ ಕಾರ್ಯಕರ್ತ ವಿನಾಯಕ ಭೋವಿ ನೀಡಿದ ದೂರಿನ ಮೇರೆಗೆ ಮಾಳಮಾರುತಿ ಠಾಣೆಯಲ್ಲಿ ಶುಭಂ ಶೇಳಕೆ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಐಟಿ ಆ್ಯಕ್ಟ್ 2000(U/s-66), ಐಪಿಸಿ ಸೆಕ್ಷನ್ 1860(U/s-153B) ಅಡಿ ದೂರು ದಾಖಲಿಸಲಾಗಿದೆ.

ಇದನ್ನೂ ಓದಿ:ಅನಂತ್ ಕುಮಾರ್ ರಿಂದ ಬಹಳ ಪ್ರಭಾವಿತನಾಗಿದ್ದೆ: ರಾಜ್ಯಪಾಲ ಗೆಹ್ಲೋಟ್

ಕರ್ನಾಟಕದ ಬೆಳಗಾವಿ, ನಿಪ್ಪಾಣಿ, ಕಾರವಾರ, ಬೀದರ, ಭಾಲ್ಕಿ ಸಂಯುಕ್ತ ಮಹಾರಾಷ್ಟ್ರ ಆಗಬೇಕು.‌ 66 ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ ನ್ಯಾಯ ಸಿಕ್ಕಿಲ್ಲ. ಕಟ್ಟಾ ಮಹಾರಾಷ್ಟ್ರವಾದಿಯಾಗಿರುವ ನಮಗೆ ಮಹಾರಾಷ್ಟ್ರ ದಿನದಂದು ಮುಕ್ತವಾಗಿ ಶುಭಾಶಯ ಹೇಳುವ ಸ್ಥಿತಿಯಲ್ಲಿ‌ಇಲ್ಲ. ಗಡಿ ಭಾಗದ ಮರಾಠಿ ಭಾಷಿಕರು ಇನ್ನೂ ನ್ಯಾಯಕ್ಕಾಗಿ ಕಾಯುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next