Advertisement

ಬಾಬರಿ‌ ಮಸೀದಿ ರೀತಿಯಲ್ಲಿ ಶ್ರೀರಂಗಪಟ್ಟಣದ ಮಸೀದಿ ಒಡೆಯಬೇಕು: ಸ್ವಾಮೀಜಿ ವಿವಾದಾತ್ಮಕ ಹೇಳಿಕೆ

11:24 AM Jan 18, 2022 | Team Udayavani |

ಶ್ರೀರಂಗಪಟ್ಟಣ: ಬಾಬರಿ‌ ಮಸೀದಿ ರೀತಿಯಲ್ಲಿ ಶ್ರೀರಂಗಪಟ್ಟಣದ ಮಸೀದಿಯನ್ನೂ ಒಡೆಯಬೇಕು ಎಂದು ಕಾಳಿ‌ಮಠದ ಋಷಿಕುಮಾರ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

Advertisement

ಸಾಮಾಜಿ‌ಕ ಜಾಲತಾಣದಲ್ಲಿ ವೀಡಿಯೋ ಮಾಡಿ ಹಾಕಿರುವ ಸ್ವಾಮೀಜಿ, ವಿವಾದಕ್ಕೆ ಸಿಲುಕಿದ್ದಾರೆ.

“ಈ‌ ಮಸೀದಿಯಲ್ಲಿ ಅದ್ಬುತವಾದ ಶಿಲೆಗಳಿದೆ. ಅದು ದೇವಸ್ಥಾನದ ಕಟ್ಟಡವಾಗಿದೆ. ಶ್ರೀರಂಗಪಟ್ಟಣದ ದೇವಾಸ್ಥಾನವನ್ನು ಮಸೀದಿ‌ ಮಾಡಿಕೊಂಡಿದ್ದಾರೆ. ಹಿಂದೂಗಳು ಜಾಗರೂಕರಾಗಿ. ಅತಿಬೇಗ ಒಡೆಯಬೇಕಾದ ಮಸೀದಿ ಇದು” ಎಂದು ಸಾಮಾಜಿಕ ಜಾಲತಾಣದಲ್ಲಿ ಋಷಿಕುಮಾರ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ:ಹುಣಸೂರು: ದರೋಡೆ-ಕಳ್ಳತನ ನಾಲ್ವರು ಆರೋಪಿಗಳ ಬಂಧನ

ಕೆಲ ದಿನಗಳ ಹಿಂದೆ‌ ಮಸೀದಿ ಒಡೆಯುತ್ತಾರೆ ಎಂದು ಮುಸ್ಲಿಂ ಮುಖಂಡರು ಆರೋಪ ಮಾಡಿದ್ದರು. ಈ ಬೆನ್ನಲ್ಲೇ ಸ್ವಾಮೀಜಿಯ ಹೇಳಿಕೆ ಆಕ್ರೋಶಕ್ಕೆ ಕಾರಣವಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next