Advertisement

ವಿವಾದಾತ್ಮಕ ಹೇಳಿಕೆ : ಮಾಜಿ ಪ್ರಧಾನಿ ದೇವೇಗೌಡರ ಕ್ಷಮೆ ಯಾಚಿಸಿದ ಕೆ.ಎನ್.ರಾಜಣ್ಣ

05:23 PM Jul 01, 2022 | Team Udayavani |

ತುಮಕೂರು : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕುರಿತು ಬೇಜವಾಬ್ದಾರಿ ಹೇಳಿಕೆ ನೀಡಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್ ನಾಯಕ ಕೆ.ಎನ್.ರಾಜಣ್ಣ ಶುಕ್ರವಾರ ಕ್ಷಮೆ ಯಾಚಿಸಿದ್ದಾರೆ.

Advertisement

ದೇವೇಗೌಡರ ಮನಸ್ಸಿಗೆ ನೋವಾಗಿದ್ದರೆ ಕ್ಷಮೆ ಇರಲಿ, ದೇವೇಗೌಡರ ಕೊಡುಗೆಗಳನ್ನು ನಾನು ಸ್ಮರಿಸುತ್ತೇನೆ, ಆ ನಿಯತ್ತು ನನಗೆ ಇದೆ. ಇಂದು ಅಥವಾ ನಾಳೆ ಅವರನ್ನು ಭೇಟಿಯಾಗುವೆ ಎಂದು ಹೇಳಿದ್ದಾರೆ.

ರಾಜಣ್ಣ ಹೇಳಿಕೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ನವದೆಹಲಿಯಲ್ಲಿ ಖಂಡಿಸಿದ್ದು, ರಾಜಣ್ಣ ಹೇಳಿಕೆ ಪಕ್ಷ ಒಪ್ಪುವುದಿಲ್ಲ.ಅವರು ಕ್ಷಮೆ ಕೇಳಲೇ ಬೇಕು. ದೇವೇಗೌಡರಿಗೆ ದೇವರು ಇನ್ನಷ್ಟು ಉತ್ತಮ‌ ಆರೋಗ್ಯ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

”ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಈಗ ಇಬ್ಬರ ಮೇಲೆ ಕೈಹಾಕಿಕೊಂಡು ಹೋಗುತ್ತಿದ್ದಾರೆ, ನಾಲ್ವರ ಮೇಲೆ ಹೋಗುವುದು ಹತ್ತಿರದಲ್ಲೇ ಇದೆ” ಎಂಬ ರಾಜಣ್ಣ ಹೇಳಿಕೆಗೆ ಜೆಡಿಎಸ್ ನಾಯಕರು, ಕಾರ್ಯಕರ್ತರು ಮತ್ತು ಹೆಚ್ ಡಿಡಿ ಅವರ ಅಭಿಮಾನಿ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next