Advertisement

ವಿವಾದಾತ್ಮಕ ಟ್ವೀಟ್‌: ಹರ್ಷ ಮೊಯ್ಲಿಗೆ ನೋಟಿಸ್‌

07:00 AM Mar 18, 2018 | |

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಟಿಕೆಟ್‌ ಹಂಚಿಕೆ ಗುತ್ತಿಗೆದಾರರು ಹಾಗೂ ಲೋಕೊಪಯೋಗಿ ಸಚಿವರು ತೀರ್ಮಾನಿಸುತ್ತಾರೆ. ಹಣದ ಪ್ರಭಾವದಿಂದ ಪಕ್ಷವನ್ನು ರಕ್ಷಣೆ ಮಾಡಬೇಕಿದೆ ಎಂದು ವಿವಾದಾತ್ಮಕ ಟ್ವೀಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ಸಚಿವ ಎಂ.ವೀರಪ್ಪ ಮೊಯ್ಲಿ ಪುತ್ರ ಹರ್ಷ ಮೊಯ್ಲಿಗೆ ಕೆಪಿಸಿಸಿ ನೋಟಿಸ್‌ ಜಾರಿಮಾಡಿದ್ದಾರೆ.

Advertisement

ಟ್ವೀಟ್‌ ಸಂಬಂಧ ಕೆಪಿಸಿಸಿ ಕಾರಣ ಕೇಳಿ ನೋಟಿಸ್‌ ನೀಡಲಾಗಿದ್ದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ನಿರ್ದೇಶನದ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್‌ ನೋಟಿಸ್‌ ಜಾರಿ ಮಾಡಿದ್ದಾರೆ.

ಒಂದು ವಾರದಲ್ಲಿ ಉತ್ತರ ನೀಡುವಂತೆ ನೋಟಿಸ್‌ನಲ್ಲಿ ಸೂಚಿಸಲಾಗಿದೆ. ಇದೇ ವಿಷಯವನ್ನು ಟ್ವೀಟ್‌ ಮಾಡಿದ್ದ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿಗೆ ನೋಟಿಸ್‌ ನೀಡಿಲ್ಲ.ಹರ್ಷ ಮೊಯ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ.

ಟಿಕೆಟ್‌ ಹಂಚಿಕೆ ಕುರಿತು ಲೋಕೋಪಯೋಗಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಅವರ ವಿರುದ್ಧ ಪರೋಕ್ಷವಾಗಿ ಹರ್ಷ ಮೊಯ್ಲಿ ಮಾಡಿದ್ದರು ಎಂದು ಹೇಳಲಾಗಿದ್ದ ಟ್ವೀಟ್‌ ಕಾಂಗ್ರೆಸ್‌ನಲ್ಲಿ ಕೋಲಾಹಲ ಸೃಷ್ಟಿಸಿತ್ತು. ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳು ಸಹ ಕಾಂಗ್ರೆಸ್‌ ವಿರುದ್ಧ ಮುಗಿಬಿದ್ದಿದ್ದವು.

Advertisement

Udayavani is now on Telegram. Click here to join our channel and stay updated with the latest news.

Next