Advertisement
ಬಸವನಬಾಗೇವಾಡಿ ತಾಲೂಕಿನ ಕುದರಿ ಸಾಲವಾಡಗಿ ಗ್ರಾಮದಲ್ಲಿ ನವೀಕರಿಸಲ್ಪಟ್ಟ ಗ್ರಾಮ ಪಂಚಾಯತ್ ಕಟ್ಟಡ ಉದ್ಘಾಟನೆ ಹಾಗೂ ಘನತ್ಯಾಜ್ಯ ವಿಲೇವಾರಿ ವಾಹನ ಚಾಲನೆ ಮತ್ತು ಪರಿಕರಣಗಳ ವಿತರಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
Related Articles
Advertisement
ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷ ಬಿ.ಎಲ್. ಪಾಟೀಲ ಮಾತನಾಡಿ, ಎರಡು ಬಾರಿ ಸತತವಾಗಿ ಗಾಂಧಿ ಪುರಸ್ಕಾರ ಮೂಲಕ ಕುದರಿ ಸಾಲವಾಡಗಿ ಪಂಚಾಯತ್ ತಾಲೂಕಿನಲ್ಲಿಯೇ ಮಾದರಿಯಾಗಿ ಹೊರ ಹೊಮ್ಮಿದೆ. ಗ್ರಾಮದ ಅಭಿವೃದ್ಧಿಗೆ ಪಂಚಾಯತ್ ಅಧಿ ಕಾರಿಗಳೊಂದಿಗೆ ಗ್ರಾಮಸ್ಥರು ಕೈ ಜೋಡಿಸಬೇಕು. ಕೊವೀಡ್-19 ಹೊಡೆದೊಡಿಸುವಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಜೀವದ ಹಂಗುತೊರೆದು ಹೋರಾಡುತ್ತಿದ್ದಾರೆ. ಅಂತಹ ಮಹನೀಯರನ್ನು ಇಲ್ಲಿ ಸನ್ಮಾನಿಸುತ್ತಿರುವ ಕಾರ್ಯ ಶ್ಲಾಘನೀಯ ಎಂದರು.ಅರಣ್ಯಾಧಿಕಾರಿ ಎ.ಎಸ್. ಪಾಕಿ ಅಧ್ಯಕ್ಷತೆ ವಹಿಸಿದ್ದರು. ಮುಖಂಡ ಬಸವರಾಜ ದೇಸಾಯಿ, ಎಸ್.ಬಿ. ಪಾಟೀಲ, ಎ.ಬಿ. ಪಾಟೀಲ, ತಾಪಂ ಸದಸ್ಯ ಜಾಕೀರ್ ಹುಸೇನ್ ಶಿವಣಗಿ, ದೇವಮ್ಮ ಹಚಡದ, ಪಿ.ಎಸ್. ಲಗಳಿ, ಬೆಳ್ಳೆಪ್ಪ ಜಕ್ಕೆನಾಳ, ಭೀಮನಗೌಡ ಹಚಡದ, ಶೇಖರಗೌಡ ಪಾಟೀಲ, ರುದ್ರಗೌಡ ಹಚಡದ, ಗುರುನಗೌಡ ಪಾಟೀಲ, ಪಿಡಿಒ ಬಿ.ಎಸ್.ಬಡಿಗೇರ ವೇದಿಕೆಯಲ್ಲಿದ್ದರು. ಪಂಚಾಯತ್ ಕಾರ್ಯದರ್ಶಿ ಎನ್.ಶೈಲಜಾ ಸ್ವಾಗತಿಸಿದರು. ಶಿಕ್ಷಕ ಎಸ್.ಬಿ. ಬಾಗೇವಾಡಿ ನಿರೂಪಿಸಿದರು. ಎಂ.ವಿ. ಅಣ್ಣಪ್ಪನವರ ವಂದಿಸಿದರು.