Advertisement

ಎನ್‌ಐಎ ತನಿಖೆಗೆ ಸಹಕಾರ: ಪಾಟೀಲ

01:22 AM Jun 28, 2019 | Team Udayavani |

ವಿಜಯಪುರ: ‘ರಾಮನಗರದಲ್ಲಿ ಬಾಂಬ್‌ ಪತ್ತೆಯಾದ ಪ್ರಕರಣದ ಕುರಿತು ರಾಷ್ಟ್ರೀಯ ತನಿಖಾ ಸಂಸ್ಥೆ ತನಿಖೆ ನಡೆಸುತ್ತಿರುವ ಕಾರಣ ಈ ವಿಷಯದಲ್ಲಿ ರಾಜ್ಯ ಸರ್ಕಾರ ಅಥವಾ ನಮ್ಮ ಪೊಲೀಸರ ಪಾತ್ರವೇನೂ ಇರುವುದಿಲ್ಲ. ಎನ್‌ಐಎ ಬಯಸುವ ಎಲ್ಲ ಸಹಕಾರ ಹಾಗೂ ನೆರವು ನೀಡುವುದಷ್ಟೇ ರಾಜ್ಯ ಸರ್ಕಾರದ ಪಾತ್ರ’ ಎಂದು ಗೃಹ ಸಚಿವ ಎಂ.ಬಿ. ಪಾಟೀಲ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಸರ್ಕಾರ ವಹಿಸಬೇಕಿರುವ ಮುನ್ನೆಚ್ಚರಿಕೆ ಕುರಿತು ಈಗಾಗಲೇ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ್ದೇನೆ. ಮತ್ತೂಂದೆಡೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿರುವ ವಿಚಾರ ಸರ್ಕಾರದ ಗಮನಕ್ಕಿದೆ. ನ್ಯಾಯಾಲಯ ನೀಡಿರುವ ಟಿಪ್ಪಣೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಅಗತ್ಯವಿರುವ ಎಲ್ಲ ಕ್ರಮಗಳನ್ನೂ ಕೈಗೊಳ್ಳಲಿದೆ ಎಂದರು. ಜಿಂದಾಲ್ ಸಂಸ್ಥೆಗೆ ಭೂಮಿ ಹಂಚಿಕೆ ವಿವಾದದ ಕುರಿತು ನನ್ನ ನೇತೃತ್ವದಲ್ಲಿ ರಚಿಸಲಾಗಿರುವ ಸಂಪುಟ ಉಪ ಸಮಿತಿ ಶೀಘ್ರವೇ ಸಭೆ ನಡೆಸಲಾಗುತ್ತದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next