ಸಮಿತಿ ಸಭೆ ನಡೆಸಲು ತೀರ್ಮಾನಿಸಿದ್ದಾರೆ.
Advertisement
ಸಮಿತಿಯ ಸಂಚಾಲಕರಾದ ಡ್ಯಾನಿಶ್ ಅಲಿ ಸಮಿತಿಯ ಎಲ್ಲ ಸದಸ್ಯರಿಗೂ ಸಭೆಯ ಮಾಹಿತಿ ನೀಡಿದ್ದಾರೆ. ಸಾಲ ಮನ್ನಾ ಗೊಂದಲ, ಏಕ ಪಕ್ಷೀಯ ನಿರ್ಧಾರ, ವರ್ಗಾವಣೆ, ಬೇರೆ ಇಲಾಖೆಗಳಲ್ಲಿ ಎಚ್.ಡಿ. ರೇವಣ್ಣ ಹಸ್ತಕ್ಷೇಪ ನಡೆಸುತ್ತಿರು ವುದು ಹಾಗೂ ಸಿದ್ದರಾಮಯ್ಯ ಮತ್ತೆ ಸಿಎಂ ಆಗುವುದಾಗಿ ನೀಡಿದ್ದಾರೆ ಎಂಬ ಹೇಳಿಕೆ ಸರ್ಕಾರದ ಎರಡೂ ಪಕ್ಷಗಳಲ್ಲಿ ಸಾಕಷ್ಟು ಗೊಂದಲಕ್ಕೆ ಕಾರಣವಾಗಿದೆ. ಅಲ್ಲದೆ ನಿಗಮ ಮಂಡಳಿ, ಸಂಪುಟ ವಿಸ್ತರಣೆ, ಎರಡೂ ಪಕ್ಷಗಳ ಅಧ್ಯಕ್ಷರನ್ನು ಸಮನ್ವಯ ಸಮಿತಿಗೆ ಸೇರ್ಪಡೆ ಮಾಡುವ ವಿಚಾರ ಚರ್ಚೆಗೆ ಬರುವ ಸಾಧ್ಯತೆ ಇದೆ.