Advertisement

ಪಿಎಫ್ಐ ಜತೆಗೆ ನಂಟು ಪೊಲೀಸ್‌ ಅಧಿಕಾರಿ ಸಸ್ಪೆಂಡ್‌

08:28 PM Oct 05, 2022 | Team Udayavani |

ತಿರುವನಂತಪುರಂ: ಇತ್ತೀಚೆಗಷ್ಟೇ ನಿಷೇಧ ಹೇರಲಾಗಿರುವ ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾದ ನಾಯಕರೊಂದಿಗೆ ಸಂಪರ್ಕ ಇಟ್ಟುಕೊಂಡಿದ್ದ ಆರೋಪದಲ್ಲಿ ಕೇರಳದ ಪೊಲೀಸ್‌ ಅಧಿಕಾರಿಯೊಬ್ಬರನ್ನು ಅಮಾನತು ಮಾಡಲಾಗಿದೆ.

Advertisement

ಕಾಲಡಿ ಪೊಲೀಸ್‌ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿವಿಲ್‌ ಪೊಲೀಸ್‌ ಅಧಿಕಾರಿ (ಸಿಪಿಒ) ಸಿ.ಎ.ಸೈಯದ್‌ ಅವರನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ಎರ್ನಾಕುಳಂ ಗ್ರಾಮೀಣ ವಿಭಾಗದ ಎಸ್‌ಪಿ ವಿವೇಕ್‌ ಕುಮಾರ್‌ ಆದೇಶ ಹೊರಡಿಸಿದ್ದಾರೆ.

ಅಮಾನತು ಆಗಿರುವ ಅಧಿಕಾರಿಯ ಬಗ್ಗೆ ಸೂಕ್ತ ತನಿಖೆ ನಡೆಸಿ, 14 ದಿನಗಳೊಳಗಾಗಿ ವರದಿಯನ್ನು ಸಲ್ಲಿಸಲು ಉಪ ಪೊಲೀಸ್‌ ವರಿಷ್ಠಾಧಿಕಾರಿ ಮಟ್ಟದ ಅಧಿಕಾರಿಯೊಬ್ಬರನ್ನು ನಿಯೋಜಿಸಲಾಗಿದೆ.

ಸೈಯದ್‌ ಅವರು ಸೆ.23ರಂದು ಹಿಂಸಾಚಾರ ಪ್ರಕರಣದಲ್ಲಿ ಪೆರುಂಬವೂರು ಪೊಲೀಸ್‌ ಠಾಣೆಯಲ್ಲಿದ್ದ ಪಿಎಫ್ಐ ಕಾರ್ಯಕರ್ತರನ್ನು ಹಿರಿಯ ಅಧಿಕಾರಿಗಳ ಅನುಮತಿ ಇಲ್ಲದೆಯೇ ಭೇಟಿ ಮಾಡುವ ಪ್ರಯತ್ನ ಮಾಡಿದ್ದರು ಎಂದು ಹೇಳಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next