Advertisement

ಅಮಾನವೀಯ ವರ್ತನೆ:ಪೇದೆ ಅಮಾನತು: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

06:30 AM Jan 16, 2018 | Team Udayavani |

ಶೃಂಗೇರಿ: ಇಲ್ಲಿನ ಶಾರದಾ ಪೀಠಕ್ಕೆ ಆಗಮಿಸಿದ್ದ ವೃದ್ಧರೊಬ್ಬರೊಂದಿಗೆ ಅಮಾನವೀಯವಾಗಿ ವರ್ತಿಸಿದ ಪೊಲೀಸ್‌ ಪೇದೆಯನ್ನು ಅಮಾನತುಗೊಳಿಸಲಾಗಿದೆ. ಭಾನುವಾರ ಈ ಘಟನೆ ನಡೆದಿದ್ದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಪೇದೆಯನ್ನು ಅಮಾನತುಗೊಳಿಸಿದ್ದಾರೆ. ಶೃಂಗೇರಿ ಠಾಣೆಯ ಸುರೇಶ್‌ ಅಮಾನತುಗೊಂಡ ಪೇದೆ.

Advertisement

ಭಾನುವಾರ ರಜೆಯ ಹಿನ್ನೆಲೆಯಲ್ಲಿ ಶ್ರೀಮಠದಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿತ್ತು. ಅಲ್ಲದೆ ಮಾಜಿ ಪ್ರಧಾನಿ ಎಚ್‌.ಡಿ.
ದೇವೇಗೌಡ ಕುಟುಂಬದವರು ನಡೆಸಿದ್ದ ಅತಿರುದ್ರ ಮಹಾಯಾಗದ ಪೂರ್ಣಾಹುತಿ ಸಮರ್ಪಣೆಯೂ ಶ್ರೀ ಮಠದಲ್ಲಿ ನಡೆಯುತ್ತಿತ್ತು. ಈ ವೇಳೆ ವೃದ್ಧರೊಬ್ಬರು ದೇವಿಯ ದರ್ಶನಕ್ಕೆ ಆಗಮಿಸಿದ್ದರು. ಕರ್ತವ್ಯ ನಿರತ ಪೇದೆ ಸುರೇಶ್‌ ಅವರನ್ನು ದರದರನೆ ಎಳೆದು ಹೊರ ಹಾಕಿದ್ದ. ಪ್ರವಾಸಿಗರೊಬ್ಬರು ಈ ದೃಶ್ಯದ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಕ್ಕೆ ಅಪಲೋಡ್‌ ಮಾಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next