Advertisement

ಕೇರಳ ರೈಲಿಗೆ ಬೆಂಕಿ: ಎಸ್‌ಐಟಿ ತನಿಖೆಗೆ ಸಿಎಂ ಪಿಣರಾಯಿ ಆದೇಶ; ಶಂಕಿತನ ರೇಖಾಚಿತ್ರ ಬಿಡುಗಡೆ

07:07 PM Apr 03, 2023 | Team Udayavani |

ತಿರುವನಂತಪುರಂ: ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ ತಗುಲಿ ಒಂದು ಶಿಶು ಸೇರಿದಂತೆ ಮೂವರು ಪ್ರಾಣ ಕಳೆದುಕೊಂಡ ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ದುರಂತದ ತನಿಖೆಗಾಗಿ ಎಸ್‌ಐಟಿ ರಚಿಸುವುದಾಗಿ ಸೋಮವಾರ ಘೋಷಿಸಿದ್ದಾರೆ.

Advertisement

ಸಾಕ್ಷಿಗಳ ಖಾತೆಯನ್ನು ಆಧರಿಸಿ ಶಂಕಿತನ ರೇಖಾಚಿತ್ರವನ್ನು ಬಿಡುಗಡೆ ಮಾಡಲಾಗಿದೆ. ಸಾಕ್ಷಿ ರೈಲಿನಲ್ಲಿ ಒಬ್ಬ ಪ್ರಯಾಣಿಕನಾಗಿದ್ದಾರೆ.

ರೈಲಿನ ಕಂಪಾರ್ಟ್‌ಮೆಂಟ್ ಒಂದಕ್ಕೆ ಬೆಂಕಿ ಹಚ್ಚಿದ ಆರೋಪಿ ಇನ್ನೂ ಪತ್ತೆಯಾಗಿಲ್ಲ. ಆದರೆ, ಆರೋಪಿ ಉತ್ತರ ಭಾರತದ ಮೂಲದವನಾಗಿದ್ದು, ಘಟನೆಯನ್ನು ಯೋಜಿಸಲಾಗಿದೆ ಎಂದು ಪೊಲೀಸರು ನಂಬಿದ್ದಾರೆ. ಆರೋಪಿಯು ತನ್ನ ಬ್ಯಾಗ್‌ನಲ್ಲಿ ಬಚ್ಚಿಟ್ಟಿದ್ದ ಬಾಟಲಿಯಲ್ಲಿ ಪೆಟ್ರೋಲ್ ಸಾಗಿಸಿರುವ ಸಾಧ್ಯತೆ ಇದೆ. ಟ್ರ್ಯಾಕ್ಸ್‌ನಿಂದ ಬ್ಯಾಗ್‌ ಪತ್ತೆಯಾಗಿದೆ.

ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಪ್ರತಿಕ್ರಿಯಿಸಿ “ಇದು ಹೃದಯ ವಿದ್ರಾವಕವಾಗಿದೆ. ನಾನು ದುಃಖಿತ ಕುಟುಂಬಗಳಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಭದ್ರತಾ ಪಡೆಗಳು ಇದನ್ನು ಗಮನಿಸಬೇಕು.” ಎಂದು ಹೇಳಿದ್ದಾರೆ.

ಇದು ಭಯೋತ್ಪಾದಕ ಕೃತ್ಯ ಎಂದು ನಂಬಲಾಗಿಲ್ಲ. ಸದ್ಯಕ್ಕೆ ಅದರ ಬಗ್ಗೆ ಯಾವುದೇ ಮಾಹಿತಿ ಅಥವಾ ಸುಳಿವುಗಳು ಲಭ್ಯವಾಗಿಲ್ಲ. ಕೇರಳ ಪೊಲೀಸ್ ಮುಖ್ಯಸ್ಥ ಅನಿಲ್ ಕಾಂತ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಘಟನೆಗೆ ಕಾರಣರಾದವರನ್ನು ಪತ್ತೆ ಹಚ್ಚಲು ಯಾವುದೇ ವಿಳಂಬ ಮಾಡದಂತೆ ಸಿಎಂ ಪಿಣರಾಯಿ ವಿಜಯನ್ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

Advertisement

ಗಾಯಗೊಂಡ ಒಂಬತ್ತು ಪ್ರಯಾಣಿಕರು ಕೋಝಿಕ್ಕೋಡ್‌ನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾನುವಾರ ತಡರಾತ್ರಿ ಎಲತ್ತೂರು ರೈಲು ನಿಲ್ದಾಣದ ಬಳಿಯ ಹಳಿಗಳ ಮೇಲೆ ಮಹಿಳೆ, ಶಿಶು ಮತ್ತು ಪುರುಷನ ಮೃತದೇಹಗಳು ಪತ್ತೆಯಾಗಿದ್ದವು.

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, “ಇದೊಂದು ಅತ್ಯಂತ ದುರದೃಷ್ಟಕರ ಘಟನೆ, ನಾನು ಕೇರಳ ಸಿಎಂ ಜೊತೆ ಮಾತನಾಡಿದ್ದೇನೆ, ಅವರು ಎಸ್‌ಐಟಿ ರಚಿಸುತ್ತಿದ್ದಾರೆ, ಆರ್‌ಪಿಎಫ್, ಜಿಆರ್‌ಪಿ ಮತ್ತು ರಾಜ್ಯ ಪೊಲೀಸರು ದುಷ್ಕರ್ಮಿಗಳನ್ನು ಹಿಡಿಯಲು ಸಹಕರಿಸುತ್ತಿದ್ದಾರೆ, ನಾವು ಖಂಡಿತವಾಗಿಯೂ ಅಪರಾಧಿಗಳನ್ನು ಹಿಡಿಯುತ್ತೇವೆ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next