Advertisement

ತಪ್ಪಿಸಿಕೊಳ್ಳಲು ಯತ್ನ : ಆ್ಯಸಿಡ್ ದಾಳಿಕೋರ ನಾಗೇಶ್ ಕಾಲಿಗೆ ಪೊಲೀಸರ ಗುಂಡು!

12:24 PM May 14, 2022 | Team Udayavani |

ಬೆಂಗಳೂರು: ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿ ತಲೆ ಮರೆಸಿಕೊಂಡು ಶುಕ್ರವಾರ ಪೋಲೀಸರ ಬಲೆಗೆ ಬಿದ್ದಿದ್ದ ನಾಗೇಶ್ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ.

Advertisement

ಕೆಂಗೇರಿ ಹ್ಯಾಂಗಿಂಗ್ ಬ್ರಿಡ್ಜ್ ಬಳಿ ಮೂತ್ರ ವಿಸರ್ಜನೆಗೆಂದು ಇಳಿದು ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ನಾಗೇಶ್ ಕಲ್ಲಿನಿಂದ ಹಲ್ಲೆ ಮಾಡಿದ ಪರಿಣಾಮ ಕಾಮಾಕ್ಷಿಪಾಳ್ಯ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಮಹಾದೇವಯ್ಯ ಅವರು ಗಾಯಗೊಂಡಿದ್ದಾರೆ. ಕೂಡಲೇ ಪೊಲೀಸ್ ಅಧಿಕಾರಿ ಪ್ರಶಾಂತ್ ಅವರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ, ಅದಾದ ಬಳಿಕವೂ ತಪ್ಪಿಸಿಕೊಳ್ಳಲು ಯತ್ನಿಸಿದಾಗ ನಾಗೇಶ್ ಬಲ ಕಾಲಿಗೆ ಗುಂಡು ಹಾರಿಸಿದ್ದಾರೆ. ಆರೋಪಿ ನಾಗೇಶ್ ಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ : ನಾಗೇಶ್ ಬಂಧನದಿಂದ ನಮ್ಮ ಪೊಲೀಸರ ದಕ್ಷತೆ ಮತ್ತೊಮ್ಮೆ ಸಾಬೀತು : ಆರಗ ಜ್ಞಾನೇಂದ್ರ

ತನ್ನನ್ನು ವಿವಾಹವಾಗಲು ಒಪ್ಪಲಿಲ್ಲ ಎಂಬ ಕಾರಣಕ್ಕೆ 25 ವರ್ಷದ ಯುವತಿ ಮೇಲೆ ಆ್ಯಸಿಡ್‌ ಹಾಕಿ ತಪ್ಪಿಸಿಕೊಂಡಿದ್ದ ನಾಗೇಶ್‌ ತಮಿಳುನಾಡಿನ ತಿರುವಣ್ಣಾಮಲೈ ಆಶ್ರಮದಲ್ಲಿ ಕಾವಿ ತೊಟ್ಟು ಅವಿತುಕೊಂಡಿದ್ದ. ಕಾವಿ ದಿರಿಸಿನಲ್ಲೇ ಸಿಕ್ಕಿಬಿದ್ದಿದ್ದ. ನಾಗೇಶ್‌ನನ್ನುಮೂಲಕ ಎರಡು ವಾರಗಳ ಬಳಿಕ ಆ್ಯಸಿಡ್‌ ಪ್ರಕರಣದ ಆರೋಪಿ ನಾಗೇಶ್‌ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದ.

Advertisement

Udayavani is now on Telegram. Click here to join our channel and stay updated with the latest news.

Next