Advertisement

ಹಕ್ಕುಪತ್ರ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ: ಕಾಗೋಡು

07:05 AM Aug 16, 2017 | Team Udayavani |

ಶಿವಮೊಗ್ಗ: ಸರ್ಕಾರಿ ಭೂಮಿಯಲ್ಲಿ ಮಂಜೂರಾತಿ ಇಲ್ಲದೆ ಮನೆ ಮತ್ತು ನಿವೇಶನ ಹೊಂದಿದವರಿಗೆ ಹಕ್ಕುಪತ್ರಕ್ಕಾಗಿ 94ಸಿ ಮತ್ತು 94ಸಿಸಿ ಅಡಿ ಅರ್ಜಿ ಸಲ್ಲಿಸುವ ಅವಧಿಯನ್ನು ಸೆ. 12ರವರೆಗೆ ವಿಸ್ತರಿಸಲಾಗಿದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬ ಅರ್ಹ ವ್ಯಕ್ತಿಗೂ ಹಕ್ಕುಪತ್ರ ಸಿಗಬೇಕೆಂಬ ಉದ್ದೇಶದಿಂದ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ ಎಂದರು.

ಕೇಂದ್ರಕ್ಕೆ ಮನವಿ: ಕೇಂದ್ರ ಸರ್ಕಾರ ಈ ಬಾರಿ ಫಸಲು ನಷ್ಟದ ಮಾರ್ಗಸೂಚಿಯಲ್ಲಿ ಬದಲಾವಣೆ ಮಾಡಿದೆ. ಹೊಸ ಮಾರ್ಗಸೂಚಿ ಪ್ರಕಾರ, ಪರಿಹಾರ ಮೊತ್ತ ಕಡಿಮೆಯಾಗಿದ್ದು, ಕಳೆದ ವರ್ಷದಂತೆ ನಷ್ಟ ಪರಿಹಾರ ದೊರಕುವುದಿಲ್ಲ. ಆದ್ದರಿಂದ ಮಾರ್ಗಸೂಚಿಯನ್ನು
ಬದಲಾಯಿಸಲು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ ಎಂದರು.

ಬೆಳೆವಿಮೆಯನ್ನು ರೈತರಿಗೆ ಸರಿಯಾಗಿ ತಲುಪಿಸಲು ಕ್ರಮ ಕೈಗೊಳ್ಳಲಾಗಿದೆ. ಪ್ರತಿಯೊಬ್ಬರೂ  ಬೆಳೆವಿಮೆಯನ್ನು 
ಮಾಡಿಸಿಕೊಳ್ಳಬೇಕು. ಹೊಸದಾಗಿ ಜಾರಿಗೊಳಿಸಲಾಗಿರುವ ಬೆಳೆವಿಮೆ ಪದ್ಧತಿಗೆ ನಮ್ಮ ರೈತರು ಹೊಂದಿಕೊಳ್ಳಬೇಕಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next