ಕೊರೊನಾ ವೈರಸ್ ಕಾರಣದಿಂದ ನಾಳೆಯಿಂದ ಒಂದು ವಾರ ಕಾಲ ರಾಜ್ಯಾದ್ಯಂತ ಮಾಲ್, ಚಿತ್ರಮಂದಿರ, ಸಭೆ, ಸಮಾರಂಭ, ಜಾತ್ರೆ, ಮದುವೆ, ಜನ್ಮ ದಿನಾಚರಣೆ, ಬೇಸಿಗೆ ಶಿಬಿರ, ಪ್ರದರ್ಶನ, ಕ್ರೀಡಾ ಕೂಟಗಳನ್ನು ಸ್ಥಗಿತಗೊಳಿಸುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತುರ್ತು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
Advertisement
ರಾಜ್ಯದಲ್ಲಿರುವ ಎಲ್ಲಾ ವಿಶ್ವವಿದ್ಯಾನಿಲಯಗಳಿಗೂ ಕೂಡ ಒಂದು ವಾರ ರಜೆಯನ್ನು ಘೋಷಿಸಲಾಗಿದೆ. ಜನರು ವಿವಿಧ ಭಾಗಗಳಿಗೆ ಪ್ರಯಾಣ ಮಾಡುವುದನ್ನು ಸಾಧ್ಯವಾದಷ್ಟೂ ಕಡಿಮೆ ಮಾಡಬೇಕು ಎಂದು ಯಡಿಯೂರೂಪ್ಪ ಅವರು ರಾಜ್ಯದ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.
Related Articles
Advertisement
– ರಾಜ್ಯದಲ್ಲಿ ಎಲ್ಲಾ ಪರೀಕ್ಷೆಗಳೂ ನಿಗದಿಯಾಗಿರುವ ವೇಳಾಪಟ್ಟಿಯಂತೆ ನಡೆಯಲಿವೆ.
– ಶುಭ ಸಮಾರಂಭಗಳಿಗೆ ಸರಕಾರದ ನಿರ್ಬಂಧ. ಮದುವೆ ಸಮಾರಂಭಗಳಲ್ಲಿ 100ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ.