Advertisement

ಕೋವಿಡ್ 19-ಭಾರತದಲ್ಲಿ ಸೋಂಕು ಪೀಡಿತರ ಸಂಖ್ಯೆ 600ಕ್ಕೆ ಏರಿಕೆ, ಲಾಕ್ ಡೌನ್ ಆರಂಭ

11:07 AM Mar 27, 2020 | Nagendra Trasi |

ನವದೆಹಲಿ:ಮಾರಣಾಂತಿಕ ಕೋವಿಡ್ 19 ವೈರಸ್ ತೀವ್ರವಾಗಿ ಹಬ್ಬುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದ ದೇಶ ವ್ಯಾಪಿ 21 ದಿನಗಳ ಲಾಕ್ ಡೌನ್ ಗೆ ಬಹುತೇಕ ಬೆಂಬಲ ದೊರಕಿದ್ದು, ಏತನ್ಮಧ್ಯೆ ಭಾರತದಲ್ಲಿ ಕೋವಿಡ್ 19 ವೈರಸ್ ಗೆ ಸಾವನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿದೆ. ಕೋವಿಡ್ 19 ಪೀಡಿತರ ಸಂಖ್ಯೆ 606ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

Advertisement

ಮುಂದಿನ 21 ದಿನಗಳ ಕಾಲ ಮನೆಯಿಂದ ಹೊರಬರಲೇ ಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ರಾತ್ರಿ 8ಗಂಟೆಗೆ ದೇಶದ ಜನತೆಯನ್ನು ಉದ್ದೇಶಿಸಿ ಮನವಿ ಮಾಡಿಕೊಂಡಿದ್ದರು.

ಕೋವಿಡ್ 19 ತಡೆಗಟ್ಟಲು ಕಠಿಣ ನಿರ್ಧಾರ ತೆಗೆದುಕೊಳ್ಳದೇ ಹೋದರೆ ಅಸಾಧ್ಯ ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡಿದ್ದರಿಂದ ಕೇಂದ್ರ ಸರ್ಕಾರ ಈ ಕ್ರಮಕ್ಕೆ ಮುಂದಾಗಿತ್ತು ಎಂದು ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next