Advertisement

ಕಟಪಾಡಿ: ನೆರೆ ನೀರಿನಲ್ಲಿ ಮೃತದೇಹ ಹೊತ್ತುಕೊಂಡು ಹೋಗಿ ಶವಸಂಸ್ಕಾರ

10:25 AM Jul 02, 2022 | Team Udayavani |

ಕಟಪಾಡಿ: ಎಡೆಬಿಡದೆ ಸುರಿಯುತ್ತಿರುವ ಮಳೆಯ ಕಾರಣ ಶವವನ್ನು ನೆರೆ ನೀರಿನಲ್ಲಿಯೇ ಹೊತ್ತುಕೊಂಡು ಹೋಗಿ ಶವ ಸಂಸ್ಕಾರ ನಡೆಸಿದ ಘಟನೆ ಕಾಪು ತಾಲೂಕು ಕೋಟೆ ಗ್ರಾ.ಪಂ. ವ್ಯಾಪ್ತಿಯ ಮಟ್ಟು ದೇವರಕುದ್ರು ಎಂಬಲ್ಲಿ ಶುಕ್ರವಾರ ನಡೆದಿದೆ.

Advertisement

ದೇವರಕುದ್ರುಗೆ ಸಂಪರ್ಕ ರಸ್ತೆ ಇದ್ದರೂ ರಸ್ತೆ, ತೋಟದಲ್ಲಿ ನೆರೆ ನೀರು ತುಂಬಿದ್ದ ಕಾರಣದಿಂದ ಆ್ಯಂಬುಲೆನ್ಸ್ ಮನೆಯವರೆಗೆ ತಲುಪಲು ಸಾಧ್ಯವಾಗಿಲ್ಲ. ಹಾಗಾಗಿ ಮಟ್ಟು ದೇವರಕುದ್ರು ಬೊಮ್ಮನ್ ತೋಟದ ರಾಮಪ್ಪ ಕುಂದರ್ ಪತ್ನಿ ಬೇಬಿ ಪೂಜಾರಿ ಅವರ ಪಾರ್ಥಿವ ಶರೀರವನ್ನು ಸುಮಾರು ಅರ್ಧ ಕಿ.ಮೀ. ದೂರದವರೆಗೆ ಹೊತ್ತುಕೊಂಡು ಹೋಗಬೇಕಾಯಿತು.

ಇದನ್ನೂ ಓದಿ:ಏಕನಾಥ್ ಶಿಂಧೆ ಅವರನ್ನು ಪಕ್ಷದ ಎಲ್ಲಾ ಹುದ್ದೆಗಳಿಂದ ವಜಾಗೊಳಿಸಿದ ಉದ್ಧವ್ ಠಾಕ್ರೆ

ಬಳಿಕ ಆ್ಯಂಬುಲೆನ್ಸ್ ಮೂಲಕ ಸಾಗಿಸಿ ಕೋಟೆ ಗ್ರಾ.ಪಂ.ನ ಸಾರ್ವಜನಿಕ ಹಿಂದೂ ರುದ್ರಭೂಮಿಯಲ್ಲಿ ಶವ ಸಂಸ್ಕಾರ ನಡೆಸಲಾಯಿತು ಎಂದು ಸ್ಥಳೀಯ ಲಕ್ಷ್ಮಣ್ ಅಂಚನ್ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next