Advertisement

ಮೋದಿಯಿಂದ ಭ್ರಷ್ಟಾಚಾರ ಮುಕ್ತ ಆಡಳಿತ: ರೂಪಾಲಾ

01:11 AM Feb 23, 2019 | Team Udayavani |

ಹುಮನಾಬಾದ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕಳೆದ ಐದು ವರ್ಷಗಳಲ್ಲಿ ಭ್ರಷ್ಟಾಚಾರಮುಕ್ತ ಆಡಳಿತ ನೀಡಿದೆ ಎಂದು ಕೇಂದ್ರ ಕೃಷಿ ಖಾತೆ ಸಚಿವ ಪುರುಷೋತ್ತಮ ರೂಪಾಲಾ ಹೇಳಿದರು. 

Advertisement

ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ “ಮೋದಿ ವಿಜಯ ಸಂಕಲ್ಪ ಯಾತ್ರೆ’ಯಲ್ಲಿ ಅವರು ಮಾತನಾಡಿದರು. 

ಮೋದಿ ನೇತೃತ್ವದ ಸರ್ಕಾರದಲ್ಲಿ ಬಿಡುಗಡೆಯಾಗುವ ಹಣ ನೇರವಾಗಿ ಗ್ರಾಪಂ ಖಾತೆಯಲ್ಲಿ ಜಮಾ ಮಾಡುವ ವ್ಯವಸ್ಥೆ ಮಾಡಲಾಗಿದ್ದು, ಆ ಮೂಲಕ ಭ್ರಷ್ಟಾಚಾರ ನಿರ್ಮೂಲನೆಗೆ ನಾಂದಿ ಹಾಡಲಾಗಿದೆ. ಕೇಂದ್ರದ ಹಣವನ್ನು 15 ದಿನದಲ್ಲಿ ಆಯಾ ಗ್ರಾಪಂ ಖಾತೆಗೆ ಜಮಾ ಮಾಡದ ರಾಜ್ಯ ಸರ್ಕಾರಕ್ಕೆ ದಂಡ ವಿಧಿ ಸಲಾಗುತ್ತಿದೆ. ಗ್ರಾಮೀಣ ಭಾಗಕ್ಕೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸುವ ವಿಷಯದಲ್ಲಿ ಫಲಾನುಭವಿ ಆಯ್ಕೆಯ ಜವಾಬ್ದಾರಿಯನ್ನು ಪಂಚಾಯಿತಿಗಳಿಗೆ ವಹಿಸಿಕೊಡಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next