Advertisement

ಭ್ರಷ್ಟಾಚಾರ ಅನ್‌ಲಿಮಿಟೆಡ್‌: ಕಾಂಗ್ರೆಸ್‌ ಟ್ವೀಟ್‌

11:18 PM Aug 04, 2019 | Lakshmi GovindaRaj |

ಬೆಂಗಳೂರು: ಮಾಜಿ ಸಚಿವ ಜನಾರ್ಧನ ರೆಡ್ಡಿ ವಿರುದ್ಧ ಅಕ್ರಮ ಗಣಿಗಾರಿಕೆ ಸಂಬಂಧ ಪ್ರಕರಣ ದಾಖಲಿಸಿದ್ದ ಐಪಿಎಸ್‌ ಅಧಿಕಾರಿಯನ್ನು ಕಡ್ಡಾಯ ನಿವೃತ್ತಿಯಾಗುವಂತೆ ಆದೇಶಿಸಿರುವ ಕ್ರಮಕ್ಕೆ ಕಾಂಗ್ರೆಸ್‌ ಟ್ವೀಟ್‌ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ.

Advertisement

ಗಾಲಿ ಜನಾರ್ಧನ ರೆಡ್ಡಿ ಅವರ ಅಕ್ರಮ ಗಣಿಗಾರಿಕೆ ವಿರುದ್ಧ ಪ್ರಕರಣ ದಾಖಲಿಸಿದ್ದ ಐಪಿಎಸ್‌ ಕಲ್ಲೋಳ್‌ ಬಿಸ್ವಾಸ್‌ಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಡ್ಡಾಯ ನಿವೃತ್ತಿ ತೆಗೆದುಕೊಳ್ಳುವಂತೆ ಆದೇಶ ನೀಡಿದೆ.

ಮೋದಿ ಅವಧಿಯಲ್ಲಿ ಜನಾರ್ಧನ ರೆಡ್ಡಿ ಜೈಲಿನಿಂದ ಬಿಡುಗಡೆಗೊಂಡಿದ್ದರು. ಅವರ ವಿರುದ್ಧದ ಪ್ರಕರಣ ಮತ್ತು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಕುದುರೆ ವ್ಯಾಪಾರ ಸಂದರ್ಭದಲ್ಲಿ ಈ ವಿಷಯವನ್ನು ಮರೆ ಮಾಚಲಾಗುತ್ತಿದೆ. ಭ್ರಷ್ಟಾಚಾರ ಅನ್‌ಲಿಮಿಟೆಡ್‌ ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next