Advertisement

ಸತ್ತ ಉಗ್ರರ ಲೆಕ್ಕ ಕೊಡಿ: ಪ್ರಕಾಶ ಅಂಬೇಡ್ಕರ್‌

12:42 AM Mar 10, 2019 | |

ಬೆಳಗಾವಿ: ನಿಜವಾಗಿಯೂ ವಾಯು ದಾಳಿಯಾಗಿದ್ದರೆ ಕೇಂದ್ರ ಸರ್ಕಾರ ಕೂಡಲೇ ಈ ದಾಳಿಯಲ್ಲಿ ಸತ್ತಿರುವ ಉಗ್ರರ ಲೆಕ್ಕವನ್ನು ದೇಶದ ಜನರಿಗೆ ಕೊಡಬೇಕು ಎಂದು ಪ್ರಕಾಶ ಅಂಬೇಡ್ಕರ್‌ ಒತ್ತಾಯಿಸಿದರು.

Advertisement

ಸುದ್ದಿಗಾರರ ಜೊತೆ ಮಾತನಾಡಿ, ಪಾಕಿಸ್ತಾನದ ಮೇಲೆ ನಡೆದ ವಾಯು ದಾಳಿಯಲ್ಲಿ ಮೃತಪಟ್ಟ ಉಗ್ರರ ಸಂಖ್ಯೆ ಎಷ್ಟು ಎಂಬ ಬಗ್ಗೆ ದೇಶದ ಜನರಲ್ಲಿ ಸಾಕಷ್ಟು ಗೊಂದಲಗಳಿವೆ. ಭಾರತೀಯ ವಾಯು ಸೇನೆ ಪಾಕಿಸ್ತಾನದ ಎಷ್ಟು ಉಗ್ರರನ್ನು ಹತ್ಯೆಗೈದಿದೆ ಎಂಬುದು ಹಲವು ದಿನಗಳಿಂದ ಪ್ರತಿಪಕ್ಷಗಳು ಪ್ರಶ್ನಿಸುತ್ತಿದ್ದರೂ ಕೇಂದ್ರ ಮೌನವಾಗಿದೆ ಎಂದರು.

ಫುಲ್ವಾಮಾ ದಾಳಿಯ ನಂತರ ಬಾಲಕೋಟ್‌ ಮೇಲೆ ಭಾರತೀಯ ವಾಯುಪಡೆ ನಡೆಸಿದ ದಾಳಿಯ ಬಗ್ಗೆ ಹಲವಾರು ದೇಶಗಳು ಮೆಚ್ಚುಗೆ ವ್ಯಕ್ತಪಡಿಸಿವೆ. ಆದರೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಹಾಗೂ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್‌ ಅವರು ಇದನ್ನು ಭಾವನಾತ್ಮಕ ವಿಷಯವನ್ನಾಗಿ ಮಾಡಿ ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದ್ದು, ಅಂತಾರಾಷ್ಟ್ರೀಯ  ಮಟ್ಟದಲ್ಲಿ ಭಾರತಕ್ಕೆ ಮುಜುಗರ ವನ್ನುಂಟು ಮಾಡಿದ್ದಾರೆ ಎಂದು ಟೀಕಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next