Advertisement

ಬಜೆಟ್ ಅಧಿವೇಶನಕ್ಕೆ ಕ್ಷಣಗಣನೆ;ಇ-ಮೇಲ್, ವಾಟ್ಸಪ್ ಮೂಲಕ ಕೈ ವಿಪ್ ಜಾರಿ

11:47 AM Feb 05, 2019 | Team Udayavani |

ಬೆಂಗಳೂರು: ರಾಜ್ಯ ಬಜೆಟ್ ಮಂಡನೆಗೆ ದಿನಗಣನೆ ನಡೆಯುತ್ತಿರುವ ನಡುವೆಯೇ ಆಪರೇಷನ್ ಕಮಲದ ಭೀತಿಯಿಂದಾಗಿ ಕಾಂಗ್ರೆಸ್ ಮತ್ತು ಬಿಜೆಪಿ ತಮ್ಮ ಶಾಸಕರಿಗೆ ಸಚೇತಕರು ವಿಪ್ ಜಾರಿ ಮಾಡಿದ್ದಾರೆ. ಆದರೆ ಜೆಡಿಎಸ್ ಶಾಸಕರ ಮೇಲೆ ನಂಬಿಕೆ ಇರೋದರಿಂದ ವಿಪ್ ಜಾರಿ ಮಾಡುತ್ತಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

Advertisement

ಬುಧವಾರದಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಪತ್ರ, ಇ ಮೇಲ್ ಹಾಗೂ ವಾಟ್ಸಪ್ ಮೂಲಕ ಶಾಸಕರಿಗೆ ಕಾಂಗ್ರೆಸ್ ಮತ್ತು ಬಿಜೆಪಿ ವಿಪ್ ಜಾರಿ ಮಾಡಲು ಮುಂದಾಗಿದೆ ಎಂದು ಮಾಧ್ಯಮದ ವರದಿ ಹೇಳಿದೆ.

ಆದರೆ ಜೆಡಿಎಸ್ ಮಾತ್ರ ವಿಪ್ ಜಾರಿ ವಿಚಾರದಲ್ಲಿ ನಿರಾಳವಾಗಿದೆ. ನಮ್ಮ ಶಾಸಕರು ಆಪರೇಷನ್ ಕಮಲಕ್ಕೆ ಒಳಗಾಗಲ್ಲ, ಒಂದು ವೇಳೆ ಶಾಸಕರೇ ಒತ್ತಾಯಿಸಿದರೆ ವಿಪ್ ಜಾರಿ ಆಡುವ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next