Advertisement
ನಗರದ ಜಿಲ್ಲಾ ವಕೀಲರ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮಹಿಳಾ ಆಸ್ತಿ ಹಕ್ಕು ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅರ್ಧದಷ್ಟು ಮಹಿಳೆಯರೇ ಇದ್ದರೂ ಅವರನ್ನು ಎರಡನೇ ದರ್ಜೆಯವರಾಗಿ ಕಾಣಲಾಗುತ್ತಿದೆ. ಜಗತ್ತಿನಾದ್ಯಂತ ಮಹಿಳೆಯರನ್ನು ಒಂದಲ್ಲ ಒಂದು ರೀತಿ ಗುಲಾಮರಂತೆ ಕಾಣುತ್ತಾ ಬರಲಾಗಿದೆ. ರಾಜಕೀಯ ಮತ್ತು ಆರ್ಥಿಕ ಅಸಮಾನತೆಗೆ ಧಾರ್ಮಿಕತೆಯ ಲೇಪನ ಮಾಡಲಾಗಿದೆ ಎಂದರು.
Related Articles
Advertisement
12ನೇ ಶತಮಾನದಲ್ಲಿ ಬಸವಾದಿ ಶರಣರು ಜಾತಿ-ಭೇದ, ವರ್ಗ ಭೇದವಿಲ್ಲದ ಸಮಾಜ ನಿರ್ಮಾಣ ಮಾಡಲು ಹೋರಾಡಿದ್ದಾರೆ. ಬುದ್ಧ, ಬಸವಣ್ಣ, ಅಂಬೇಡ್ಕರ್, ಮಹಾತ್ಮ ಗಾಂಧೀಜಿ ಮೊದಲಾದವರು ಮಹಿಳಾ ಅಸಮಾನತೆ ನಿವಾರಣೆಗೆ ಸಾಕಷ್ಟು ಹೋರಾಡಿದ್ದಾರೆ. ಆದರೂ ಮಹಿಳೆಗೆ ಸಂಪೂರ್ಣ ಸ್ವಾತಂತ್ರ್ಯ ದೊರೆತಿಲ್ಲ. ಒಂದಲ್ಲ ಒಂದು ರೀತಿ ಅಸಮಾನತೆಗೆ ತುತ್ತಾಗುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಸರ್ಕಾರ ಮಹಿಳೆಯರ ಸಬಲೀಕರಣಕ್ಕಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಇಂದು ಐಎಎಸ್, ಕೆಎಎಸ್, ಜಡ್ಜ್, ಸಾಹಿತ್ಯ, ಕ್ರೀಡೆ, ವಿಜ್ಞಾನ, ಕಲೆ ಹೀಗೆ ಎಲ್ಲಾ ಕ್ಷೇತ್ರದಲ್ಲಿ ಮಹಿಳೆಯರಿದ್ದಾರೆ. ಇಷ್ಟಾದರೂ ಸಮಾಜದಲ್ಲಿ ಬಾಲ್ಯವಿವಾಹ, ಅತ್ಯಾಚಾರ, ವರದಕ್ಷಿಣೆ ಕಿರುಕುಳ, ಅನಿಷ್ಟ ಪದ್ಧತಿಗಳ ನಿವಾರಣೆ ಆಗಿಲ್ಲ. ಬದಲಾಗಿ ಭ್ರೂಣ ಹತ್ಯೆ, ವಿವಾಹ ವಿಚ್ಛೇದನ, ಬಾಡಿಗೆ ತಾಯಿ ಹೀಗೆ ಹೊಸ ಹೊಸ ಸಮಸ್ಯೆಗಳು ಎದುರಾಗುತ್ತಿದ್ದು, ಇಂತಹ ಸಮಸ್ಯೆಗಳ ನಿವಾರಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕಿದೆ ಎಂದರು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಅಂಬಾದಾಸ್ ಕುಲಕರ್ಣಿ ಜಿ., ವಕೀಲರ ಸಂಘದ ಜಿಲ್ಲಾಧ್ಯಕ್ಷ ಎನ್.ಟಿ. ಮಂಜುನಾಥ್ ಉಪಸ್ಥಿತರಿದ್ದರು.