Advertisement

ಹೆಂಡತಿಯನ್ನು ಕೊಂದು ತಾನೂ ನೇಣು ಹಾಕಿಕೊಂಡ ಪತಿ!

12:52 PM Mar 11, 2022 | Team Udayavani |

ಧಾರವಾಡ: ಹೆಂಡತಿಯನ್ನು ಕೊಂದ ಪತಿರಾಯ ಕೊನೆಗೆ ತಾನೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡದಲ್ಲಿ ನಡೆದಿದೆ.

Advertisement

ಇಲ್ಲಿಯ ಗಣೇಶ ನಗರದಲ್ಲಿ ಬೆಳ್ಳಂಬೆಳಿಗ್ಗೆ ಈ ಘಟನೆ ನಡೆದಿದ್ದು, ಧಾರವಾಡದ ಜನತೆಯನ್ನು ಬೆಚ್ಚಿ ಬೀಳಿಸಿದೆ.

ಇದನ್ನೂ ಓದಿ:ಹರ್ಷ ಕುಟುಂಬಕ್ಕೆ 25 ಲಕ್ಷ: ಯಾವ ಅಜೆಂಡಾ ಅಡಗಿದೆ? ; ಪ್ರಿಯಾಂಕ ಖರ್ಗೆ

ಗಣೇಶ ನಗರದ ಗೌಳಿ ಜನಾಂಗದ ಮನಿಶಾ ಹಾಗೂ ಶೆಟ್ಟು ಎಂಬ ದಂಪತಿಯೇ ಸಾವಿಗೀಡಾದವರು. ಮೊದಲು ಪತ್ನಿ ಮನಿಶಾಳ ಹತ್ಯೆ ಮಾಡಿದ ಶೆಟ್ಟು ಕೊನೆಗೆ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನೆಗೆ ಕೌಟುಂಬಿಕ ಕಲಹವೇ ಕಾರಣ ಇರಬಹುದು ಎಂದು ಶಂಕಿಸಲಾಗಿದ್ದು, ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next