Advertisement

ಮಹಾ ಪ್ರವಾಹ: ಬೆಳಗಾವಿಯಲ್ಲಿ 20 ಗಂಟೆಯ ನಂತರ ದಂಪತಿ ರಕ್ಷಣೆ

09:59 AM Aug 09, 2019 | Team Udayavani |

ಬೆಳಗಾವಿ: ಬೆಳಗಾವಿ- ಗೋಕಾಕ ಮಾರ್ಗದಲ್ಲಿ ತುಂಬಿ ಹರಿಯುತ್ತಿರುವ ಬಳ್ಳಾರಿ ನಾಲಾ ಪ್ರವಾಹದಲ್ಲಿ ಸುಮಾರು 20 ಗಂಟೆಯಿಂದ ಸಿಲುಕಿದ್ದ ದಂಪತಿಯನ್ನು ಕಡೆಗೂ ರಕ್ಷಣೆ ಮಾಡಲಾಗಿದೆ.

Advertisement

ಸತತವಾಗಿ ಕಾರ್ಯಾಚರಣೆ ನಡೆಸಿದರೂ ರಕ್ಷಣೆ ಮಾಡಲು ಸಾಧ್ಯವಾಗಲಿಲ್ಲ.

ತಾಲೂಕಿನ ಕಬಲಾಪುರ ಗ್ರಾಮದ ಬಳಿ ಸಿಲುಕಿಕೊಡ ದಂಪತಿಯ ಸ್ಥಿತಿ ಚಿಂತಾಜನಕವಾಗಿದೆ. ರೈತ ಕಾಡಪ್ಪ ಹಾಗೂ ಪತ್ನಿ ರತ್ನವ್ವ ತೋಟದ ಮನೆಯಲ್ಲಿದ್ದಾಗ ಪ್ರವಾಹ ಬಂದಿತ್ತು.‌ ಮೂರು ದಿನಗಳಿಂದಲೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದರೂ ವಿಫಲವಾಗುತ್ತಿದ್ದು, ಕಡೆಗೂ ಗುರುವಾರ ಮಧ್ಯಾಹ್ನ ರಕ್ಷಣೆ ಮಾಡಲಾಗಿದೆ.

ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಹಾಗೂ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಸ್ಥಳದಲ್ಲಿಯೇ ಬೀಡು ಬಿಟ್ಟಿದ್ದರು. ಕಾರ್ಯಾಚರಣೆ ವೇಗ ಪಡೆದುಕೊಂಡಿದೆ. ಬೆಳಗಾವಿಯಲ್ಲಿಯೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇದ್ದು, ದಂಪತಿ ರಕ್ಷಣೆ ಕುರಿತು ಕ್ಷಣ ಕ್ಷಣದ ಮಾಹಿತಿ ಪಡೆದುಕೊಳ್ಳುತ್ತಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next