Advertisement

ಖಿನ್ನತೆಯಿಂದ ಬಳಲುತ್ತಿದ್ದ ದಂಪತಿ ನೇಣಿಗೆ ಶರಣು

12:04 PM Oct 14, 2019 | keerthan |

ಶಿವಮೊಗ್ಗ: ಖಿನ್ನತೆಯಿಂದ ಬಳಲುತ್ತಿದ್ದ ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭದ್ರಾವತಿ ತಾಲೂಕಿನ ಆಗರದಳ್ಳಿ ಕ್ಯಾಂಪ್ ನಲ್ಲಿ ರವಿವಾರ ಸಂಜೆ ನಡೆದಿದೆ.

Advertisement

ಸಂತೋಷ (32) ಹಾಗೂ ಪಾರ್ವತಿ (27) ಮೃತರು.

ಕಳೆದ ಒಂದುವರೆ ವರ್ಷದ ಹಿಂದೆ ಮದುವೆಯಾಗಿದ್ದ ಇವರಿಬ್ಬರು ರವಿವಾರ ಸಂಜೆ ಭೂಮಿ ಹುಣ್ಣಿಮೆ ಹಬ್ಬ ಆಚರಿಸಲು ತಾವೇ ಅಡುಗೆ ಸಿದ್ಧಪಡಿಸಿದ್ದರು. ನಂತರ ಮನೆಯವರನ್ನು ಗದ್ದೇಗೆ ಕಳುಹಿಸಿ ಗಂಡ ಹೆಂಡತಿ ಮನೆಯಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದಿದ್ದಾರೆ.

ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next