Advertisement

SIT ಕಿರುಕುಳ ವಿರುದ್ಧ ಕೋರ್ಟ್‌ ನಲ್ಲಿ ಕೇಸು: ಬಿಜೆಪಿ‌ ಮುಖಂಡ ದೇವರಾಜೇಗೌಡ

12:00 AM May 09, 2024 | Team Udayavani |

ಬೆಂಗಳೂರು: ಪ್ರಕರಣದ ವಿಶೇಷ ತನಿಖಾ ತಂಡ ಒಂದು ದಿಕ್ಕಿನಲ್ಲಿ ಮಾತ್ರ ತನಿಖೆ ನಡೆಸುತ್ತಿದೆ. ಹೀಗಾಗಿ ಗುರುವಾರ ಕೋರ್ಟ್‌ ನಲ್ಲಿ ಎಸ್‌ಐಟಿ ವಿರುದ್ಧ ಕ್ರಿಮಿನಲ್‌ ಆರೋಪದಡಿ ಖಾಸಗಿ ಪ್ರಕರಣ ದಾಖಲಿಸುತ್ತೇವೆ ಎಂದು ಹಾಸನ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಹೇಳಿದರು.

Advertisement

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಹಿಂದೆಪ್ರಕರಣದಲ್ಲಿ ಕಾರ್ತಿಕ್‌ನ ವಿಚಾರಣೆ ನಡೆಸಲಾಗಿದೆ. ಆದರೆ ಆತನನ್ನು ಬಂಧಿಸಿಲ್ಲ. ಇನ್ನು ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳ್ಳುತ್ತಿದ್ದಂತೆ ರೇವಣ್ಣ ಅವರನ್ನು ಬಂಧಿಸಲಾಗಿದೆ. ಆದರೆ ಕಾರ್ತಿಕ್‌ ಜಾಮೀನು ಅರ್ಜಿ ವಜಾಗೊಂಡರೂ ಏಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿದರು.

ವಿಚಾರಣೆ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧ ನಾನು ಆರೋಪ ಮಾಡಿದಾಗ, ಆ ಹೇಳಿಕೆಯನ್ನು ಅಳಿಸಿ ಹಾಕುವಂತೆ ತನಿಖಾಧಿ ಕಾರಿಗಳು ಒತ್ತಡ ಹಾಕಿದ್ದಾರೆ. ಈ ವಿಷಯವನ್ನೂ ದೂರಿನಲ್ಲಿ ಪ್ರಸ್ತಾವಿಸಲಾಗುತ್ತದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next