Advertisement

ಸಿಡಿ ಪ್ರಕರಣ : ನರೇಶ್​ ಗೌಡ -ಶ್ರವಣ್ ಗೆ ಕೋರ್ಟ್ ನಿಂದ ನಿರೀಕ್ಷಣಾ ಜಾಮೀನು!

05:46 PM Jun 08, 2021 | Team Udayavani |

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣದ ಸೂತ್ರದಾರಿಗಳು ಎನ್ನಲಾದ ಮಾಜಿ ಪತ್ರಕರ್ತ ನರೇಶ್​ ಗೌಡ ಹಾಗೂ ಶ್ರವಣ್ ​ಗೆ ಬೆಂಗಳೂರಿನ 91ನೇ ಸಿಸಿಹೆಚ್​ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

Advertisement

ಪ್ರಕರಣದ ಹಿನ್ನೆಲೆ ಕಳೆದ ಮಾರ್ಚ್ 2 ರಿಂದ ತಲೆಮರೆಸಿಕೊಂಡಿರುವ ಈ ಇಬ್ಬರೂ  ರಮೇಶ್​ ಜಾರಕಿಹೊಳಿ ಸಿಡಿ ಬಿಡುಗಡೆ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ರು. ತನಿಖಾ ತಂಡ ಈ ಇಬ್ಬರನ್ನು ಪತ್ತೆಹಚ್ಚಲು ಶ್ರಮಿಸುತ್ತಿತ್ತು. ಈ ಇಬ್ಬರ ಮೇಲೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹನಿಟ್ರ್ಯಾಪ್‌ ಮತ್ತು ಬ್ಲ್ಯಾಕ್​ಮೇಲ್‌ ಆರೋಪ ಮಾಡಿದ್ದರು.

ಮೇ 31ರಂದು ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ವಿಭಾಗೀಯ ಪೀಠ ಯುವತಿ ತಂದೆ ದಾಖಲಿಸಿದ್ದ ಹೆಬಿಯಸ್ ಕಾರ್ಪಸ್ ಅರ್ಜಿ ಇತ್ಯರ್ಥಗೊಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next