Advertisement

ಅವಕಾಶ ಕೋರಿ ಕೋರ್ಟ್‌ ಮೊರೆ

11:18 AM Feb 02, 2018 | Team Udayavani |

ಬೆಂಗಳೂರು: ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿ 2014-15 ಹಾಗೂ 2015-16ನೇ ಸಾಲಿನಲ್ಲಿ ವ್ಯಾಸಾಂಗ ಮಾಡಿರುವ ವಿದ್ಯಾರ್ಥಿಗಳ ಹಿತ ಕಾಪಾಡಲು ಬದ್ಧ ಎಂದು ತಿಳಿಸಿರುವ ರಾಜ್ಯ ಸರ್ಕಾರ, ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಸಮಿತಿ ವರದಿ ಜಾರಿಗೆ ತರಲು ಅವಕಾಶ ನೀಡುವಂತೆ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಗುರುವಾರ ಮನವಿ ಮಾಡಿದೆ.

Advertisement

ಕರ್ನಾಟಕ ಮುಕ್ತ ವಿವಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎ.ಎಸ್‌. ಬೋಪಣ್ಣ ಅವರಿದ್ದ ಏಕಸದಸ್ಯಪೀಠದ ಮುಂದೆ ಸರ್ಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೋಕೇಟ್‌ ಜನರಲ್‌, ವಿದ್ಯಾರ್ಥಿಗಳ ಪದವಿಗೆ ಮಾನ್ಯತೆ ಕೊಟ್ಟು ಅವರ ವೃತ್ತಿ ಭವಿಷ್ಯಕ್ಕೆ ಅನುಕೂಲ ಕಲ್ಪಿಸಲು ಸರ್ಕಾರ ಬದ್ಧವಾಗಿದೆ ಎಂದರು.

ರತ್ನಪ್ರಭಾ ಅವರ ಸಮಿತಿ ಮಾಡಿರುವ ಶಿಫಾರಸು ಸರ್ಕಾರ ಜಾರಿ ಮಾಡಬಹುದು. ಇದಕ್ಕೆ ನ್ಯಾಯಾಲಯ ಅಡ್ಡಿ ಬರುವುದಿಲ್ಲ ಎಂದು ತಿಳಿಸಿದ ನ್ಯಾಯಪೀಠ, ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿತು. 

Advertisement

Udayavani is now on Telegram. Click here to join our channel and stay updated with the latest news.

Next