Advertisement

ಫೇಸ್‌ಬುಕ್‌ನಲ್ಲಿ ಶೃಂಗೇರಿ ಶ್ರೀಗಳ ಬಗ್ಗೆ ಅವಹೇಳನ : ಆರೋಪಿಗೆ ಶಿಕ್ಷೆ ವಿಧಿಸಿ ಕೋರ್ಟ್

10:35 PM Jul 19, 2022 | Team Udayavani |

ಶೃಂಗೇರಿ: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಶೃಂಗೇರಿ ಜಗದ್ಗುರುಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ಪೋಸ್ಟ್‌ ಮಾಡಿದ್ದ ಆರೋಪಿಗೆ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಮಂಗಳವಾರ ತೀರ್ಪು ನೀಡಿದೆ.

Advertisement

ಧಾರವಾಡದ ಮುನ್ನ ಹಜಾರ್‌ ಶಿಕ್ಷೆಗೊಳಗಾದ ಯುವಕ. 2015, ನ. 19ರಂದು ಶ್ರೀ ಶಾರದಾ ಪೀಠದ ಜಗದ್ಗುರುಗಳ ಬಗ್ಗೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಬರಹವೊಂದನ್ನು ಪೋಸ್ಟ್‌ ಮಾಡಿದ್ದ. ಈ ಕುರಿತು ಐಪಿಸಿ ಸೆಕ್ಷನ್‌ 295/ಎ ಮತ್ತು ಐಪಿಸಿ 505 ಸೆಕ್ಷನ್‌ ಅಡಿ ಪ್ರಕರಣ ದಾಖಲಾಗಿತ್ತು.

ಹಿಂದೂ ಧರ್ಮದ ಧಾರ್ಮಿಕ ನಂಬಿಕೆಗೆ ಅವಮಾನ ಮಾಡಿದ್ದರ ಸಂಬಂಧ ನ್ಯಾಯಾಲಯದಲ್ಲಿ 16 ಜನ ಸಾಕ್ಷಿದಾರರ ವಿಚಾರಣೆ ನಡೆಸಲಾಗಿತ್ತು.

ವಾದ-ಪ್ರತಿವಾದ ಆಲಿಸಿದ ನ್ಯಾಯಾಧಿಧೀಶ ದಾಸರಿ ಕ್ರಾಂತಿ ಕಿರಣ್‌ ಅವರು ಆರೋಪಿಗೆ 3 ವರ್ಷ 3 ತಿಂಗಳು ಜೈಲು ಹಾಗೂ 3 ಸಾವಿರ ರೂ. ದಂಡ ವಿಧಿಸಿದ್ದಾರೆ. ಸರಕಾರಿ ಅಭಿಯೋಜಕಿ ಹರಿಣಾಕ್ಷಿ ವಾದ ಮಂಡಿಸಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next