Advertisement

ಕುಮಾರಸ್ವಾಮಿಗೆ ಭೂ ಕಂಟಕ: ಖುದ್ದು ಹಾಜರಾಗುವಂತೆ ಕೋರ್ಟ್‌ ಸಮನ್ಸ್‌

09:59 AM Sep 06, 2019 | Team Udayavani |

ಬೆಂಗಳೂರು: ಹಲಗೇವಡೇರಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.‌ ಡಿ. ಕುಮಾರಸ್ವಾಮಿ ಅವರಿಗೆ ನ್ಯಾಯಾಲಯ ಸಮನ್ಸ್‌ ನೀಡಿದೆ.

Advertisement

ಡಿನೋಟಿಫಿಕೇಶನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಕುಮಾರಸ್ವಾಮಿಯವರು ಖುದ್ದು ಹಾಜರಾಗುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್‌ ನೀಡಿದೆ.

ಬೆಂಗಳೂರಿನ ಬನಶಂಕರಿಯ ಹಲಗೇವಡೇರಹಳ್ಳಿಯಲ್ಲಿ ಮೂರು ಎಕರೆ, 34 ಗುಂಟೆ ಜಾಗ ಡಿನೋಟೀಫಿಕೇಶನ್‌ ಮಾಡಿದ ಆರೋಪ ಹೆಚ್‌ ಡಿ ಕುಮಾರಸ್ವಾಮಿಯವರ ಮೇಲಿದೆ. ಚಾಮರಾಜನಗರದ ಮಹದೇವ ಸ್ವಾಮಿ ಎಂಬವರು ಈ ಕುರಿತು ಅರ್ಜಿ ಸಲ್ಲಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next